ಆರೋಪಿ ಶಾರಿಕ್ 
ರಾಜ್ಯ

ಮಂಗಳೂರು ಸ್ಫೋಟ: ಶಾರಿಕ್ ಜೊತೆಗೆ ಕೇರಳದಲ್ಲಿ ಸಂಪರ್ಕದಲ್ಲಿದ್ದವರ ಪತ್ತೆಗೆ ತನಿಖೆ ಆರಂಭಿಸಿದ ಎನ್‌ಐಎ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರಿಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನ ಹರಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಬೆಂಗಳೂರು: ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗಳು ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರಿಕ್ ಜೊತೆಗಿನ ಕೇರಳದ ಸಂಪರ್ಕವನ್ನು ಪತ್ತೆಹಚ್ಚುವತ್ತ ಗಮನ ಹರಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತು ಸೈಬರ್ ಕ್ರೈಂ ಘಟಕದ ಅಧಿಕಾರಿಗಳು ಈಗಾಗಲೇ ಕೇರಳ ತಲುಪಿದ್ದು, ಶಂಕಿತ ಭಯೋತ್ಪಾದಕ ಮೊಹಮ್ಮದ್ ಶಾರಿಕ್‌ನ ನಂಟು ಭೇದಿಸಲು ಹುಡುಕಾಟ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮೊಹಮ್ಮದ್ ಶಾರಿಕ್ ಕೇರಳದ ಆಲುವಾ, ಮುನಂಬಂ ಮತ್ತು ಕೊಚ್ಚಿ ನಗರಗಳಲ್ಲಿ ತಂಗಿದ್ದ ಎಂಬ ಮಾಹಿತಿ ಸಿಕ್ಕಿದೆ. ಮೊಹಮ್ಮದ್ ಶಾರಿಕ್ ಡ್ರಗ್ ದಂಧೆಯಲ್ಲಿಯೂ ಭಾಗಿಯಾಗಿರುವ ಬಗ್ಗೆಯೂ ತನಿಖಾಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದಾರೆ.

ಮೊಹಮ್ಮದ್ ಶಾರಿಕ್‌ನನ್ನು ನಿಯಂತ್ರಿಸುವ ಮತ್ತು ಹಿಡಿತದಲ್ಲಿಟ್ಟುಕೊಂಡು ಆತನಿಂದ ಕೆಲಸಗಳನ್ನು ಮಾಡಿಸುತ್ತಿದ್ದ ಕೆಲವು ಕಿಂಗ್‌ಪಿನ್‌ಗಳನ್ನು ಅವರು ಹುಡುಕುತ್ತಿದ್ದಾರೆ. ಈ ಗುಂಪು ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಯೋಜಿಸಿದೆ. ದೇಶದಲ್ಲಿ ನಡೆಯಲು ಯೋಜಿಸಿದ್ದ ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ನೀಡಲು ಚಿನ್ನದ ಕಳ್ಳಸಾಗಣೆ ಮತ್ತು ಮಾದಕವಸ್ತು ಕಳ್ಳಸಾಗಣೆಯಲ್ಲಿ ಈ ತಂಡ ತೊಡಗಿತ್ತು ಎಂದು ಮೂಲಗಳು ವಿವರಿಸಿವೆ.

ಈ ಗುಂಪಿಗೆ ಕೇರಳದಲ್ಲಿ ರಾಜಕೀಯ ಬೆಂಬಲವಿದೆಯೇ ಎಂದು ಎನ್ಐಎ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಕರ್ನಾಟಕದ ಗಡಿದೆ ಹೊಂದಿಕೊಂಡಿರುವ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ತನಿಖೆ ನಡೆಯಲಿದೆ.

ನವೆಂಬರ್ 19 ರಂದು ಕರಾವಳಿ ಪಟ್ಟಣ ಮಂಗಳೂರಿನ ನಾಗುರಿ ಪ್ರದೇಶದಲ್ಲಿ ಕುಕ್ಕರ್ ಸ್ಫೋಟ ಸಂಭವಿಸಿದೆ. ಘಟನೆ ನಂತರ ಕರ್ನಾಟಕ ಪೊಲೀಸರು ಇದನ್ನು ಭಯೋತ್ಪಾದಕ ಕೃತ್ಯವೆಂದು ಘೋಷಿಸಿದ್ದಾರೆ.

ಶಂಕಿತ ಭಯೋತ್ಪಾದಕ ಶಾರಿಕ್‌ನ ಕೃತ್ಯ ಮತ್ತು ಕ್ರಮವು ಜಾಗತಿಕ ಭಯೋತ್ಪಾದನಾ ಜಾಲದಿಂದ ಪ್ರೇರಿತವಾಗಿದೆ ಎಂದು ಹೆಚ್ಚುವರಿ ಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಹೇಳಿದ್ದಾರೆ. ಈ ಬೇರುಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ತನಿಖೆ ಪ್ರಗತಿಯಲ್ಲಿದೆ. ಹೆಚ್ಚಿನ ತನಿಖೆಗಾಗಿ ಕರ್ನಾಟಕ ಸರ್ಕಾರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ