ರಸ್ತೆಯ ದುರವಸ್ಥೆಯನ್ನು ತೋರಿಸುತ್ತಿರುವ ಪಕ್ಷಗಳ ಸದಸ್ಯರು ಮತ್ತು ಗ್ರಾಮಸ್ಥರು, ರಾಜೀನಾಮೆ ಸಲ್ಲಿಕೆ 
ರಾಜ್ಯ

ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳ ವರ್ತನೆಗೆ ಬೇಸತ್ತು ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ!

ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಚಿಕ್ಕಮಗಳೂರು: ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಇದಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಯಡಗುರು ಎಂಬಲ್ಲಿ. ಮಳೆ, ಪ್ರವಾಹಕ್ಕೆ ಹಾನಿಗೀಡಾದ ರಸ್ತೆಗಳನ್ನು ದುರಸ್ತಿ ಮಾಡಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ನಮ್ಮಿಂದ ಜನರಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು 450ಕ್ಕೂ ಹೆಚ್ಚು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಕಾರ್ಯಕರ್ತರು ಸಾಮೂಹಿಕವಾಗಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಹಾಗೂ ಯಾವುದೇ ರಾಜಕೀಯ ನಾಯಕರನ್ನು ಗ್ರಾಮದೊಳಗೆ ಬರಲು ಬಿಡಬಾರದು ಎಂದು ಕೂಡ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT