ರಸ್ತೆಯ ದುರವಸ್ಥೆಯನ್ನು ತೋರಿಸುತ್ತಿರುವ ಪಕ್ಷಗಳ ಸದಸ್ಯರು ಮತ್ತು ಗ್ರಾಮಸ್ಥರು, ರಾಜೀನಾಮೆ ಸಲ್ಲಿಕೆ 
ರಾಜ್ಯ

ಚಿಕ್ಕಮಗಳೂರು: ರಸ್ತೆ ದುರಸ್ತಿ ಮಾಡದ ಜನಪ್ರತಿನಿಧಿಗಳ ವರ್ತನೆಗೆ ಬೇಸತ್ತು ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ!

ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಚಿಕ್ಕಮಗಳೂರು: ಮೂಲಭೂತ ಸೌಕರ್ಯ ಒದಗಿಸಿಕೊಟ್ಟಿಲ್ಲ, ಸರಿಯಾಗಿ ರಾಜಕಾರಣಿಗಳು ಕೆಲಸ ಮಾಡುತ್ತಿಲ್ಲ ಎಂದು ಅಲ್ಲಲ್ಲಿ ಗ್ರಾಮಸ್ಥರು, ಜನರು ಮತ ಚಲಾವಣೆ ಮಾಡದಿರುವುದು ಕೇಳಿದ್ದೇವೆ, ನೋಡಿದ್ದೇವೆ. ಇಲ್ಲಿ ಜನರಿಗೆ ಸರಿಯಾಗಿ ಪಕ್ಷಗಳ ರಾಜಕಾರಣಿಗಳು ಸ್ಪಂದಿಸುತ್ತಿಲ್ಲ, ರಸ್ತೆ ಕಾಮಗಾರಿ ಮಾಡಿಕೊಟ್ಟಿಲ್ಲ ಎಂದು ರಾಜ್ಯದ ಮೂರೂ ಪಕ್ಷಗಳ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಇದಾಗಿದ್ದು ಚಿಕ್ಕಮಗಳೂರು ಜಿಲ್ಲೆಯ ಯಡಗುರು ಎಂಬಲ್ಲಿ. ಮಳೆ, ಪ್ರವಾಹಕ್ಕೆ ಹಾನಿಗೀಡಾದ ರಸ್ತೆಗಳನ್ನು ದುರಸ್ತಿ ಮಾಡಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ, ನಮ್ಮಿಂದ ಜನರಿಗೆ ಉತ್ತರ ನೀಡಲು ಸಾಧ್ಯವಾಗುತ್ತಿಲ್ಲ ಎಂದು 450ಕ್ಕೂ ಹೆಚ್ಚು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ನ ಕಾರ್ಯಕರ್ತರು ಸಾಮೂಹಿಕವಾಗಿ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. 

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸದಂತೆ ಹಾಗೂ ಯಾವುದೇ ರಾಜಕೀಯ ನಾಯಕರನ್ನು ಗ್ರಾಮದೊಳಗೆ ಬರಲು ಬಿಡಬಾರದು ಎಂದು ಕೂಡ ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!