ಚಿರತೆ ದಾಳಿಗೆ ಮೃತಪಟ್ಟ ಯುವತಿ 
ರಾಜ್ಯ

ಮೈಸೂರಿನಲ್ಲಿ ಚಿರತೆ ದಾಳಿಗೆ ಯುವತಿ ಸಾವು: ಶೂಟೌಟ್ ಗೆ ಸರ್ಕಾರ ಆದೇಶ; 7.5 ಲಕ್ಷ ರೂ. ಪರಿಹಾರ ಘೋಷಣೆ, ಉದ್ಯೋಗ ಭರವಸೆ

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಚಿರತೆ ಎರಡು ಮಂದಿಯನ್ನು ಬಲಿತೆಗೆದುಕೊಂಡ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವ ಆದೇಶ ಹೊರಡಿಸಿದ್ದು, ಕಾರ್ಯಾಚರಣೆಗಿಳಿದಿದೆ.

ಮೈಸೂರು: ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಚಿರತೆ ಎರಡು ಮಂದಿಯನ್ನು ಬಲಿತೆಗೆದುಕೊಂಡ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವ ಆದೇಶ ಹೊರಡಿಸಿದ್ದು, ಕಾರ್ಯಾಚರಣೆಗಿಳಿದಿದೆ.

ಚಿರತೆ ದಾಳಿಯಿಂದ ಮೃತಪಟ್ಟ ಯುವತಿ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 7.5 ಲಕ್ಷ ಪರಿಹಾರ ಘೋಷಣೆಯಾಗಿದ್ದು ಅದರಲ್ಲಿ 5 ಲಕ್ಷ ರೂಪಾಯಿ ಚೆಕ್ ಈಗಾಗಲೇ ವಿತರಿಸಲಾಗಿದೆ. ಮೇಘನಾಳ ಕುಟುಂಬಕ್ಕೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ 5 ವರ್ಷಗಳ ಕಾಲ 2 ಸಾವಿರ ರೂಪಾಯಿ ಪಿಂಚಣಿ ರೀತಿಯಲ್ಲಿ ನೀಡಲಾಗುವುದು ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯಾ ತಿಳಿಸಿದ್ದಾರೆ. 

ಮೃತ ಯುವತಿ ಮೇಘನಾಳ ಕುಟುಂಬಸ್ಥರಲ್ಲಿ ಒಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಗುವುದು. ಅದು ತಕ್ಷಣವೇ ಜಾರಿಗೆ ಬರಲಿದೆ ಎಂದಿದ್ದಾರೆ. 

ಚಿರತೆ ದಾಳಿ ಸುದ್ದಿ ಕಾಳ್ಗಿಚ್ಚಿನಂತೆ ಹರಡುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು ತಾಲೂಕು ಜನರಲ್ ಆಸ್ಪತ್ರೆ ಎದುರು ಜಮಾಯಿಸಿ ಚಿರತೆ ಹಿಡಿಯಲು ವಿಫಲರಾದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಅರಣ್ಯಾಧಿಕಾರಿಗಳು ಕಣ್ಗಾವಲು ಹೆಚ್ಚಿಸಿದ್ದರೂ ಚಿರತೆ ಚಲನವಲನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ವಾರದ ಹಿಂದೆ ಚಿರತೆ ಕಾಣಿಸಿಕೊಂಡ ಕೆಬ್ಬೆಹುಂಡಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

ಶೂಟೌಟ್  ಕಾರ್ಯಾಚರಣೆಗಿಳಿದ ತಂಡ: ಚಿರತೆ ಹಾವಳಿಯನ್ನು ತಡೆಗಟ್ಟಲು, ಮನುಷ್ಯರಿಗೆ ಪ್ರಾಣಕ್ಕೆ ತೊಂದರೆಯಾಗುವುದನ್ನು ಮುಂದಿನ ದಿನಗಳಲ್ಲಿ ತಪ್ಪಿಸಲು ಟಿ ನರಸೀಪುರ ತಾಲ್ಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡುತ್ತೇವೆ. ಚಿರತೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲಲು ಸರ್ಕಾರದಿಂದ ಅನುಮತಿ ಸಿಕ್ಕಿದೆ ಎಂದು ಮಾಲತಿ ಪ್ರಿಯಾ ತಿಳಿಸಿದ್ದಾರೆ. 

ಮೇಘನಾ ನಿನ್ನೆ ತನ್ನ ಮನೆಯ ಹಿಂದೆ ಸಾಯಂಕಾಲ ಕುಳಿತಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ತೀವ್ರ ಗಾಯಗೊಂಡ ಮೇಘನಾಳನ್ನು ಚಿಕಿತ್ಸೆಗಾಗಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.

ಅರಣ್ಯಾಧಿಕಾರಿಗಳು ಕಣ್ಗಾವಲು ಹೆಚ್ಚಿಸಿದ್ದರೂ ಚಿರತೆ ಚಲನವಲನ ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ವಾರದ ಹಿಂದೆ ಚಿರತೆ ಕಾಣಿಸಿಕೊಂಡ ಕೆಬ್ಬೆಹುಂಡಿ ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT