ಮಂಜುನಾಥ್ 
ರಾಜ್ಯ

ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ನಾಮನಿರ್ದೇಶನ ಮಾಡಿದ ರಾಜ್ಯ ಸರ್ಕಾರ!

ರೌಡಿಶೀಟರ್ ಗಳ ರಾಜಕೀಯ ಪ್ರವೇಶ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ರನ್ನು ನಾಮನಿರ್ದೇಶನ ಮಾಡುವುದು ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರು: ರೌಡಿಶೀಟರ್ ಗಳ ರಾಜಕೀಯ ಪ್ರವೇಶ ಇದೀಗ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಇದರ ಮಧ್ಯೆ ರಾಜ್ಯ ಸರ್ಕಾರ ಆನೇಕಲ್ ಪುರಸಭೆ ಸದಸ್ಯನಾಗಿ ರೌಡಿಶೀಟರ್ ಮಂಜುನಾಥ್ ರನ್ನು ನಾಮನಿರ್ದೇಶನ ಮಾಡುವುದು ಅಚ್ಚರಿಗೆ ಕಾರಣವಾಗಿದೆ. 

ಮಂಜುನಾಥ್ ಅಲಿಯಾಸ್ ಉಪ್ಪಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ನಖರಬಾಬು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಪಕ್ಷ ಸೇರ್ಪಡೆಗೂ ಮುನ್ನವೇ ಮಂಜುನಾಥ್ ಗೆ ಅಧಿಕಾರ ನೀಡಿರುವುದು ಮತ್ತೊಮ್ಮೆ ರಾಜಕೀಯ ವಲಯದಲ್ಲಿ ವಾಗ್ಯುದ್ಧಕ್ಕೆ ಕಾರಣವಾಗಲಿದೆ.

ಬಿಜೆಪಿ ಸಂಸದರು, ಶಾಸಕರ ಜೊತೆ ಸೈಲೆಂಟ್ ಸುನೀಲ್ ವೇದಿಕೆ ಮೇಲೆ ಕಾಣಿಸಿಕೊಂಡ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಗ್ಯುದ್ದ ಪ್ರಾರಂಭವಾಗಿದೆ. ಇನ್ನು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಕೆಸರೆರೆಚಾಟದಲ್ಲಿ ತೊಡಗಿದ್ದಾರೆ. 

ಇದಕ್ಕೂ ಮುನ್ನ ಫೈಟರ್ ರವಿ ಬಿಜೆಪಿ ಸೇರಿ ಆಗಿತ್ತು. ಬೆತ್ತನಗೆರೆ ಶಂಕರ ಬಿಜೆಪಿ ನಾಯಕರ ಬೆನ್ನ ಹಿಂದೆ ಸುತ್ತುತ್ತಿದ್ದಾನೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT