ಸಂಗ್ರಹ ಚಿತ್ರ 
ರಾಜ್ಯ

ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

ಐದು ವರ್ಷದ ಗಂಡು ಚಿರತೆಯೊಂದು ಗುರುವಾರ ಭೂತಪುರ ಮಂಡಲದ ತಾಟಿಕೊಂಡ ಗ್ರಾಮದ ಬಳಿ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ44ರ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದೆ.

ಮಹೆಬೂಬನಗರ: ಐದು ವರ್ಷದ ಗಂಡು ಚಿರತೆಯೊಂದು ಗುರುವಾರ ಭೂತಪುರ ಮಂಡಲದ ತಾಟಿಕೊಂಡ ಗ್ರಾಮದ ಬಳಿ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ44ರ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದೆ.
    
ಚಿರತೆ ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ವರದಿಯಾಗುತ್ತಿರುವ ಮೂರನೇ ಘಟನೆ ಇದಾಗಿದೆ.

ಕಳೆದೆರಡು ವರ್ಷಗಳ ಹಿಂದೆ ದೇವರಕದ್ರ ಮಂಡಲದ ರೈಲ್ವೆ ಹಳಿ ಮೇಲೆ ಚಿರತೆಯೊಂದು ಶವವಾಗಿ ಪತ್ತೆಯಾಗಿತ್ತು. ಕಳೆದ ವರ್ಷ, ಎಮ್ಮೆಗಳ ಹಿಂಡಿನ ಮೇಲೆ ದಾಳಿ ಮಾಡಿ ನಂತರ ಪ್ರತಿದಾಳಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಚಿರತೆ ಸಾವನ್ನಪ್ಪಿತ್ತು.

ಜಿಲ್ಲಾ ಅರಣ್ಯಾಧಿಕಾರಿ ಎಸ್.ಸತ್ಯನಾರಾಯಣ ಮಾತನಾಡಿ, ಜಿಂಕೆಗಳ ಸಂಖ್ಯೆ ಕ್ಷೀಣಿಸುತ್ತಿರುವುದರಿಂದ ಚಿರತೆಗಳು ಬೇಟೆ ಸಿಗದೆ ಕಾಡಿನಿಂದ ಹೊರಬರುತ್ತಿರಬಹುದು. ಇತ್ತೀಚಿನ ದಿನಗಳಲ್ಲಿ, ಬೇಟೆ ಹಾಗೂ ಹೆಣ್ಣು ಪ್ರಾಣಿಗಳ ಹುಡುಕಾಟಕ್ಕಾಗಿ ಕಾಡು ಪ್ರಾಣಿಗಳು ವಿಕಾರಾಬಾದ್ ಮತ್ತು ಇತರ ಪ್ರದೇಶಗಳ ಕಾಡುಗಳಿಂದ ಮಹೆಬೂಬ್‌ನಗರ ಕಾಡುಗಳಿಗೆ ವಲಸೆ ಹೋಗುತ್ತಿವೆ ಎಂದು ಹೇಳಿದ್ದಾರೆ.

ಮೆಹಬೂಬ್‌ನಗರ ಪಟ್ಟಣಕ್ಕೆ ಸಮೀಪವಿರುವ ಅಪ್ಪನಪಲ್ಲಿ ಮೀಸಲು ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ ಕಾಡೆಮ್ಮೆಯೊಂದು ಕಾಣಿಸಿಕೊಂಡಿದ್ದು. ಆದರೆ, ಮತ್ತೆ ಅದು ಪತ್ತೆಯಾಗಲಿಲ್ಲ. ಅಲ್ಲಿಂದ ಅದು ತಾನಿದ್ದ ಪ್ರದೇಶಕ್ಕೆ ಹೋಗಿರಬಹುದು. ಗ್ರಾಮಗಳು ಹಾಗೂ ಅರಣ್ಯ ಪ್ರದೇಶಗಲ್ಲಿ ರಸ್ತೆಗಳ ಇಂತಹ ಘಟನೆಗಳು ಸಂಭವಿಸುತ್ತಿವೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT