ಗಾಯಾಳು ಬಾಲಕರು 
ರಾಜ್ಯ

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯ

ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದ್ದು, ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದ ಇಬ್ಬರು ಬಾಲಕರಿಗೆ ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ವಯರ್(Electric shock) ತಾಗಿದ್ದರಿಂದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.

ಗಾಯಾಳು ಬಾಲಕರು ಸುಪ್ರೀತ್(12) ಮತ್ತು ಚಂದ್ರು(10) ಎಂದು ತಿಳಿದುಬಂದಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಪಾರಿವಾಳ ಹಿಡಿಯುವ ಹವ್ಯಾಸ ಹೊಂದಿರುವ ಇವರಿಬ್ಬರು ಗುರುವಾರ ಸಂಜೆ 6:30ರ ಸುಮಾರಿಗೆ ಪಾರಿವಾಳ ಹಿಡಿಯುವ ಯತ್ನದಲ್ಲಿ ಹೈಟೆನ್ಶನ್ ವಿದ್ಯುತ್ ವಯರ್ ಅನ್ನು ಆಕಸ್ಮಿಕವಾಗಿ ಸ್ಪರ್ಶಿಸಿದ್ದಾರೆ. ಇದರಿಂದ ಇಬ್ಬರಿಗೂ ತೀವ್ರತರದ ಸುಟ್ಟ ಗಾಯಗಳಾಗಿವೆ. ಆಸ್ಪತ್ರೆ ಮೂಲಗಳ ಪ್ರಕಾರ ಇಬ್ಬರೂ ಬಾಲಕರಿಗೆ ಶೇ.60ಕ್ಕಿಂತ ಹೆಚ್ಚು ಸುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT