ಸಾಂದರ್ಭಿಕ ಚಿತ್ರ 
ರಾಜ್ಯ

ಭ್ರಷ್ಟಾಚಾರ ಆರೋಪ: ವಾಣಿಜ್ಯ ತೆರಿಗೆ ಇಲಾಖೆಯ 18 ಮಂದಿ ಅಧಿಕಾರಿಗಳು ಅಮಾನತು!

ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲಂಚ ವಸೂಲಿಯಲ್ಲಿ ತೊಡಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಥಮಿಕ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಆಯುಕ್ತ ಸಿ ಶಿಖಾ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಉದ್ಯಮಿಗಳ ದೂರಿನ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನಿಖೆಗೆ ಆದೇಶಿಸಿದ್ದು, ಒಂದು ವಾರದ ಹಿಂದೆ ಕ್ರಮವನ್ನು ಪ್ರಾರಂಭಿಸಲಾಗಿತ್ತು ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ ಇಷ್ಟೊಂದು ಪ್ರಮಾಣದ ಅಧಿಕಾರಿಗಳನ್ನು ಏಕಕಾಲದಲ್ಲಿ ಅಮಾನತುಗೊಳಿಸಿರುವುದು ಇದೇ ಮೊದಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಲಯದ ಜಾರಿ ವಿಭಾಗದ ಜಂಟಿ ಆಯುಕ್ತೆ ಎಸ್‌.ಜಿ. ಸವಿತಾ, ಜಾರಿ ವಿಭಾಗದ ಸಹಾಯಕ ಆಯುಕ್ತರಾದ ವಿ. ಉಮಾದೇವಿ (ಚಿಕ್ಕಬಳ್ಳಾಪುರ), ಕೆ.ಜಿ. ಶ್ರೀರಂಗಪ್ಪ (ಚಿತ್ರದುರ್ಗ), ಬಿ.ಎಲ್‌. ಕೇಶವಮೂರ್ತಿ (ಮಡಿಕೇರಿ) ಅಮಾನತುಗೊಂಡಿರುವ ಹಿರಿಯ ಅಧಿಕಾರಿಗಳಾಗಿದ್ದಾರೆ.

ಇಲಾಖೆಯ ಜಾರಿ ವಿಭಾಗದ ವಾಣಿಜ್ಯ ತೆರಿಗೆ ಅಧಿಕಾರಿಗಳಾದ ನಳಿನಾಕುಮಾರಿ, ಗಾಯತ್ರಿ ಎನ್‌.ಟಿ. (ಮೈಸೂರು), ಜಯರಾಂ ಎಸ್‌., ಜನಾರ್ದನ್‌ ಆರ್‌., ಅಪ್ಪು ಪೂಜಾರಿ (ಬೆಂಗಳೂರು),  ವಾಣಿಜ್ಯ ತೆರಿಗೆ ನಿರೀಕ್ಷಕರಾದ ಸಿ.ಎನ್‌. ಪಾಟೀಲ್‌ (ಬೆಳಗಾವಿ), ವಾಸುದೇವ್‌ ಎಚ್‌.ಎಸ್‌. (ಮಡಿಕೇರಿ), ಯೋಗಾನಂದ್‌ ಕೆ. (ಮೈಸೂರು), ರಂಗಸ್ವಾಮಿ ಆರ್‌., ವಿಜಯ್‌ಕುಮಾರ್‌ ಜೆ. (ಚಿತ್ರದುರ್ಗ), ಶ್ರೀಧರ್‌ ಎಸ್‌., ದಿನೇಶ್‌ ಎಸ್‌. ಮತ್ತು ಉಮೇಶ್‌ ಆರ್‌. (ಬೆಂಗಳೂರು ಕೇಂದ್ರ ಕಚೇರಿ) ಹಾಗೂ ಮಡಿಕೇರಿಯ ಜಾರಿ ವಿಭಾಗದ ಸಹಾಯಕ ಆಯುಕ್ತರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಧನರಾಜ್‌ ಎಂ.ಕೆ. ಅವರನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT