ಸಾಂದರ್ಭಿಕ ಚಿತ್ರ 
ರಾಜ್ಯ

ಭ್ರಷ್ಟಾಚಾರ ಆರೋಪ: ವಾಣಿಜ್ಯ ತೆರಿಗೆ ಇಲಾಖೆಯ 18 ಮಂದಿ ಅಧಿಕಾರಿಗಳು ಅಮಾನತು!

ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಭ್ರಷ್ಟಾಚಾರ ಆರೋಪದ ಮೇಲೆ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಮೂವರು ಸಹಾಯಕ ಆಯುಕ್ತರು ಸೇರಿದಂತೆ 18 ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಲಂಚ ವಸೂಲಿಯಲ್ಲಿ ತೊಡಗಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಪ್ರಾಥಮಿಕ ತನಿಖೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಆಯುಕ್ತ ಸಿ ಶಿಖಾ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ, ಉದ್ಯಮಿಗಳ ದೂರಿನ ಮೇರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತನಿಖೆಗೆ ಆದೇಶಿಸಿದ್ದು, ಒಂದು ವಾರದ ಹಿಂದೆ ಕ್ರಮವನ್ನು ಪ್ರಾರಂಭಿಸಲಾಗಿತ್ತು ಎಂದು ತಿಳಿದುಬಂದಿದೆ.

ಇತ್ತೀಚಿನ ದಿನಗಳಲ್ಲಿ ಇಷ್ಟೊಂದು ಪ್ರಮಾಣದ ಅಧಿಕಾರಿಗಳನ್ನು ಏಕಕಾಲದಲ್ಲಿ ಅಮಾನತುಗೊಳಿಸಿರುವುದು ಇದೇ ಮೊದಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯ ಮೈಸೂರು ವಲಯದ ಜಾರಿ ವಿಭಾಗದ ಜಂಟಿ ಆಯುಕ್ತೆ ಎಸ್‌.ಜಿ. ಸವಿತಾ, ಜಾರಿ ವಿಭಾಗದ ಸಹಾಯಕ ಆಯುಕ್ತರಾದ ವಿ. ಉಮಾದೇವಿ (ಚಿಕ್ಕಬಳ್ಳಾಪುರ), ಕೆ.ಜಿ. ಶ್ರೀರಂಗಪ್ಪ (ಚಿತ್ರದುರ್ಗ), ಬಿ.ಎಲ್‌. ಕೇಶವಮೂರ್ತಿ (ಮಡಿಕೇರಿ) ಅಮಾನತುಗೊಂಡಿರುವ ಹಿರಿಯ ಅಧಿಕಾರಿಗಳಾಗಿದ್ದಾರೆ.

ಇಲಾಖೆಯ ಜಾರಿ ವಿಭಾಗದ ವಾಣಿಜ್ಯ ತೆರಿಗೆ ಅಧಿಕಾರಿಗಳಾದ ನಳಿನಾಕುಮಾರಿ, ಗಾಯತ್ರಿ ಎನ್‌.ಟಿ. (ಮೈಸೂರು), ಜಯರಾಂ ಎಸ್‌., ಜನಾರ್ದನ್‌ ಆರ್‌., ಅಪ್ಪು ಪೂಜಾರಿ (ಬೆಂಗಳೂರು),  ವಾಣಿಜ್ಯ ತೆರಿಗೆ ನಿರೀಕ್ಷಕರಾದ ಸಿ.ಎನ್‌. ಪಾಟೀಲ್‌ (ಬೆಳಗಾವಿ), ವಾಸುದೇವ್‌ ಎಚ್‌.ಎಸ್‌. (ಮಡಿಕೇರಿ), ಯೋಗಾನಂದ್‌ ಕೆ. (ಮೈಸೂರು), ರಂಗಸ್ವಾಮಿ ಆರ್‌., ವಿಜಯ್‌ಕುಮಾರ್‌ ಜೆ. (ಚಿತ್ರದುರ್ಗ), ಶ್ರೀಧರ್‌ ಎಸ್‌., ದಿನೇಶ್‌ ಎಸ್‌. ಮತ್ತು ಉಮೇಶ್‌ ಆರ್‌. (ಬೆಂಗಳೂರು ಕೇಂದ್ರ ಕಚೇರಿ) ಹಾಗೂ ಮಡಿಕೇರಿಯ ಜಾರಿ ವಿಭಾಗದ ಸಹಾಯಕ ಆಯುಕ್ತರ ಕಚೇರಿಯ ಪ್ರಥಮ ದರ್ಜೆ ಸಹಾಯಕ ಧನರಾಜ್‌ ಎಂ.ಕೆ. ಅವರನ್ನು ಅಮಾನತು ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT