ಸಾಂದರ್ಭಿಕ ಚಿತ್ರ 
ರಾಜ್ಯ

ವಾಹನ ನಿಲುಗಡೆ ವಿಚಾರಕ್ಕೆ ಜಗಳ: ವ್ಯಕ್ತಿ, ಆತನ ಕುಟುಂಬದ ಮೇಲೆ ಸ್ಥಳೀಯ ನಿವಾಸಿಗಳಿಂದ ಹಲ್ಲೆ!

ಜಯನಗರ 5ನೇ ಬ್ಲಾಕ್‌ನ 39ನೇ ಕ್ರಾಸ್‌ನಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ 53 ವರ್ಷದ ಮಹಿಳೆ ಸೇರಿದಂತೆ ಮೂವರ ಮೇಲೆ ಸ್ಥಳೀಯ ನಿವಾಸಿ ಹಾಗೂ ಆತನ ಚಾಲಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರು: ಜಯನಗರ 5ನೇ ಬ್ಲಾಕ್‌ನ 39ನೇ ಕ್ರಾಸ್‌ನಲ್ಲಿ ವಾಹನ ನಿಲುಗಡೆ ವಿಚಾರವಾಗಿ ನಡೆದ ಜಗಳದಲ್ಲಿ 53 ವರ್ಷದ ಮಹಿಳೆ ಸೇರಿದಂತೆ ಮೂವರ ಮೇಲೆ ಸ್ಥಳೀಯ ನಿವಾಸಿ ಹಾಗೂ ಆತನ ಚಾಲಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಹಲ್ಲೆಗೊಳಗಾದವರು ಬಸವನಗುಡಿ ನಿವಾಸಿಗಳಾಗಿದ್ದು, ಸಂಬಂಧಿಕರ ಗೃಹ ಪ್ರವೇಶ ಹಿನ್ನೆಲೆಯಲ್ಲಿ ಜಯನಗರಕ್ಕೆ ಬಂದಿದ್ದರು. ಲೆಕ್ಕ ಪರಿಶೋಧಕರಾಗಿರುವ ಬಸವನಗುಡಿಯ ಗೋವಿಂದ ರಸ್ತೆಯ ನಿವಾಸಿ ಎಸ್ ಅಮನ್ (29) ಅವರು ತಮ್ಮ ಎಸ್‌ಯುವಿ ವಾಹನವನ್ನು ಮನೆಯೊಂದರ ಬಳಿ ನಿಲ್ಲಿಸಿದ್ದರು, ಇದಕ್ಕೆ ಸ್ಥಳೀಯ ನಿವಾಸಿಯೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು, ಇಬ್ಬರ ನಡುವ ಮಾತಿನ ಚಕಮಕಿ ನಡೆದಿದೆ.

ಬುಧವಾರ ಬೆಳಿಗ್ಗೆ 9 ರಿಂದ 9.30 ರ ನಡುವೆ ಘಟನೆ ನಡೆದಿದ್ದು, ಅಮನ್, ಅವರ ತಾಯಿ ಅನಿತಾ ಮತ್ತು ಅವರ ಸೋದರ ಸಂಬಂಧಿ ತುಷಾರ್ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಹಲ್ಲೆಗೊಳಗಾದ ಅಮನ್ ಅವರು ಜಯನಗರ ಪೊಲೀಸರಿಗೆ ದೂರು ನೀಡಿದ್ದಾರೆ. ಅಮನ್ ಅವರು ತಮ್ಮ ತಾಯಿ ಜೊತೆಗೆ ಜಯನಗರಕ್ಕೆ ಬಂದಿದ್ದು, ಮನೆಯೊಂದರ ಬಳಿ ಕಾರನ್ನು ನಿಲ್ಲಿಸಿ, ನಡೆದುಕೊಂಡು ಹೋಗುತ್ತಿದ್ದಾಗ, ಸ್ಥಳೀಯ ನಿವಾಸಿಯೊಬ್ಬರು ಕಾರು ತೆಗೆಯುವಂತೆ ಅವರನ್ನು ತಡೆದಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಅಮನ್ ಅವರನ್ನು ಥಳಿಸಿದ್ದಾರೆ. ಅಲ್ಲದೆ, ಬೆದರಿಕೆಯನ್ನೂ ಹಾಕಿದ್ದಾರೆಂದು ದೂರುದಾರರು ಆರೋಪಿಸಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದೊಂದು ಕ್ಷುಲ್ಲಕ ವಿಚಾರವಾಗಿದ್ದು, ಆರೋಪಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರಕರಣ ಸಂಬಂಧ ಯಾರೊಬ್ಬರನ್ನೂ ಬಂಧನಕ್ಕೊಳಪಡಿಸಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT