ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ವಸತಿ ಯೋಜನೆಯಲ್ಲಿ ಶೇ.3 ರಷ್ಟು ದಿವ್ಯಾಂಗರಿಗೆ ಮೀಸಲು: ಮುಖ್ಯಮಂತ್ರಿ ಬೊಮ್ಮಾಯಿ

ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಶೇ.3 ರಷ್ಟು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಬೆಂಗಳೂರು: ದಿವ್ಯಾಂಗರಿಗೆ ವಸತಿ ಯೋಜನೆಯಲ್ಲಿ ಶೇ.3 ರಷ್ಟು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.  

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿಂದು ಆಯೋಜಿಸಿದ್ದ ವಿಶ್ವ ವಿಶೇಷ ಚೇತನರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದಿವ್ಯಾಂಗರಿಗೆ 5 ಲಕ್ಷ ರೂ. ವರೆಗೆ ಸರ್ಕಾರಿ ವೆಚ್ಚದಲ್ಲಿ ಅರೋಗ್ಯ ಸೇವೆ ಒದಗಿಸುವ ವಿಮಾ ಯೋಜನೆ ಜಾರಿ ಮಾಡಲಾಗುವುದು ಎಂದರು. 

ದಿವ್ಯಾಂಗರ ವಿದ್ಯಾಭ್ಯಾಸಕ್ಕೆ ನೆರವಾಗಲು ಮುಂಬರುವ ಬಜೆಟ್ ನಲ್ಲಿ ವಿಶೇಷ ಅನುದಾನ ಒದಗಿಸಲಾಗುವುದು, ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ ಡ್ ವರ್ಕ್ ಶಾಪ್ ಗಳನ್ನು ತೆರೆಯಲಾಗುವುದು ಮತ್ತು ವಿಶೇಷ ಚೇತನರಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ಮೂರು ಚಕ್ರಗಳ ಬೈಸಿಕಲ್ ವಿತರಿಸಲಾಗುವುದು ಎಂದು ಅವರು ತಿಳಿಸಿದರು. 

ಬುದ್ದಿಮಾಂದ್ಯ, ಶ್ರವಣ ದೋಷವುಳ್ಳ, ಅಂಧ ಮಕ್ಕಳ ಸ್ಕಾಲರ್ ಶಿಪ್ ಗಳನ್ನು ದಾಖಲೆ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ. ವಸತಿ ನಿಲಯಗಳಿಗೆ ಅಗತ್ಯ ಅನುದಾನ ನೀಡಿ, ಮಾಸಿಕ ನಿರ್ವಹಣಾ ವೆಚ್ಚವನ್ನು ಸಹ ಏರಿಸಲಾಗಿದೆ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT