ಸಿಎಂ ಬೊಮ್ಮಾಯಿ 
ರಾಜ್ಯ

ಬಿಜೆಪಿ ಜನಸಂಕಲ್ಪ ಯಾತ್ರೆಗೆ ಜನತೆಯಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿಯ 'ಜನ ಸಂಕಲ್ಪ ಯಾತ್ರೆ'ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇದನ್ನು ಡಿಸೆಂಬರ್ ತಿಂಗಳಲ್ಲಿ ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಭಾನುವಾರ ಹೇಳಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಹತ್ತಿರ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಹೈದರಾಬಾದ್ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಭಾಗದಲ್ಲಿ ನಡೆದಿದೆ. ಈ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದು ಹೇಳಿದ್ದಾರೆ.

ಇದರ ಜೊತೆಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಜನರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ಶಿವಮೊಗ್ಗ ಜಿಲ್ಲೆ ಶಿರಾಳಕೊಪ್ಪದಲ್ಲಿ ಗೋಡೆ ಬರಹ ವಿಚಾರವಾಗಿ ಮಾತನಾಡಿ, ಈ ಸಂಬಂಧ ಸ್ಥಳೀಯ ಪೊಲೀಸರು ತನಿಖೆ ಮಾಡುತ್ತಿದ್ದು, ಕ್ರಮಕೈಗೊಳ್ಳುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT