ಬ್ಯಾನರ್ ಹಿಡಿದು ಪ್ರತಿಭಟಿಸಿದ ರೌಡಿಶೀಟರ್ ಪಾನಿಪುರಿ ಮಂಜ 
ರಾಜ್ಯ

ಬಿಜೆಪಿಗರೇ ನನ್ನನೂ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಿ: ರೌಡಿಶೀಟರ್‌ ಪಾನಿಪುರಿ ಮಂಜ

ರೌಡಿ ಶೀಟರ್‌ಗಳಾದ ಫೈಟರ್ ರವಿ, ಸೈಲೆಂಟ್‌ ಸುನೀಲ್‌ ಮತ್ತು ಬೆತ್ತನಗೆರೆ ಶಂಕರ ಬಿಜೆಪಿಗೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮೈಸೂರಿನ ರೌಡಿ ಶೀಟರ್‌ವೊಬ್ಬರು ತನ್ನನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಮೈಸೂರು: ರೌಡಿ ಶೀಟರ್‌ಗಳಾದ ಫೈಟರ್ ರವಿ, ಸೈಲೆಂಟ್‌ ಸುನೀಲ್‌ ಮತ್ತು ಬೆತ್ತನಗೆರೆ ಶಂಕರ ಬಿಜೆಪಿಗೆ ಸೇರ್ಪಡೆಗೊಂಡು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿರುವ ಬೆನ್ನಲ್ಲೇ ಮೈಸೂರಿನ ರೌಡಿ ಶೀಟರ್‌ವೊಬ್ಬರು ತನ್ನನ್ನೂ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ಬಿಜೆಪಿ ನಾಯಕರನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಗಣೇಶನಗರ ನಿವಾಸಿಯಾಗಿರುವ ಮಂಜು ಅಲಿಯಾಸ್ ಪಾನಿ ಪುರಿ ಮಂಜ ಎಂಬಾತ ಮೇಟಗಳ್ಳಿಯಲ್ಲಿ 1 ಪ್ರಕರಣ ಹಾಗೂ ಉದಯಗಿರಿ ಠಾಣೆಯಲ್ಲಿ 4 ಪ್ರಕರಣಗಳು ಹಾಗೂ ಉದಯಗಿರಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಎಂದು ದಾಖಲಾಗಿರುವ ರೌಡಿಶೀಟರ್ ಜಿಲ್ಲಾ ನ್ಯಾಯಾಲಯದ ಎದುರು ಗಾಂಧಿ ಪ್ರತಿಮೆ ಬಳಿ ಕೇಸರಿ ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಒತ್ತಾಯಿಸಿ ಶನಿವಾರ ಪ್ರತಿಭಟನೆ ನಡೆಸಿದರು.

ಆದಿಚುಂಚನಗಿರಿ ಮಠದ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ, ಸಿದ್ದಗಂಗಾ ಮಠದ ಮಾಜಿ ಪೀಠಾಧಿಪತಿ ಶಿವಕುಮಾರ ಸ್ವಾಮಿ, ಕನಕದಾಸ, ವಾಲ್ಮೀಕಿ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್ ಹಿಡಿದುಕೊಂಡು ಪಾನಿ ಪುರಿ ಮಂಜ ಅವರು ತಮ್ಮ ಬೇಡಿಕೆಯನ್ನು ಬಿಜೆಪಿ ಮುಂದಿಟ್ಟಿದ್ದಾರೆ. ಬ್ಯಾನರ್‌ನಲ್ಲಿ ಬಿಜೆಪಿಗರೇ ನಾನೊಬ್ಬ ರೌಡಿ ಶೀಟರ್, ನನಗೂ ನಿಮ್ಮ ಪಕ್ಷದಲ್ಲಿ ಸ್ಥಾನ ಕೊಡುವಿರಾ ಎಂದಿದ್ದಾರೆ.

ಬಿಜೆಪಿ ಕಾರ್ಯಕ್ರಮದಲ್ಲಿ ಸಚಿವರು, ಸಂಸದರಿರುವ ವೇದಿಕೆಯಲ್ಲಿಯೇ ರೌಡಿ ಶೀಟರ್‌ಗಳು ಕೂಡ ವೇದಿಕೆ ಹಂಚಿಕೊಳ್ಳುತ್ತಿದ್ದು, ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕೆಸರೆರೆಚಾಟಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT