ಶಿವಮೂರ್ತಿ ಮುರುಘಾ ಶರಣರು 
ರಾಜ್ಯ

ನೂತನ ಮಠಾಧೀಶರ ನೇಮಕ ಕುರಿತು ಮುರುಘಾ ಮಠದಲ್ಲಿ ಗದ್ದಲ

ಡಾ.ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ನೇಮಕ ಕುರಿತು ಮಠದಲ್ಲಿ ಗದ್ದಲಗಳು ಏರ್ಪಟ್ಟಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗ: ಡಾ.ಶಿವಮೂರ್ತಿ ಮುರುಘಾ ಶರಣರು ಪೋಕ್ಸೋ ಆರೋಪದ ಮೇಲೆ ಜೈಲು ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಮುರುಘಾ ಮಠಕ್ಕೆ ನೂತನ ಪೀಠಾಧಿಪತಿ ನೇಮಕ ಕುರಿತು ಮಠದಲ್ಲಿ ಗದ್ದಲಗಳು ಏರ್ಪಟ್ಟಿದೆ ಎಂದು ತಿಳಿದುಬಂದಿದೆ.

ನೂತನ ಪೀಠಾಧಿಪತಿ ನೇಮಕ ಸಂಬಂಧ ನಿನ್ನೆ ವೀರಶೈವ-ಲಿಂಗಾಯತ ಸಮಾಜದ ಸದಸ್ಯರೊಂದಿಗೆ ಸಭೆ ನಡೆಯಿತು. ಮಾಜಿ ಸಿಎಂ ಎಸ್.ನಿಜಲಿಂಗಪ್ಪ ಅವರ ಸ್ಮಾರಕದಲ್ಲಿ ಮಾಜಿ ಸಚಿವ ಎಚ್.ಏಕಾಂತಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗದ್ದಲಗಳು ಏರ್ಪಟ್ಟಿದ್ದು ಕಂಡು ಬಂದಿತ್ತು.

ಆಡಳಿತಾಧಿಕಾರಿ ನೇಮಕ ವಿಚಾರ ಚರ್ಚೆಗೆ ಬಂದಾಗ ಅದರ ಅಗತ್ಯವಿಲ್ಲ ಎಂದು ಯುವಕ ಕಾರ್ತಿಕ್ ಆಕ್ಷೇಪ ವ್ಯಕ್ತಪಡಿಸಿದರು. ಇದರಿಂದ ಸಭೆಯಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಸಭೆಯಲ್ಲಿದ್ದ ಕೆಲವರು ಕಾರ್ತಿಕ್ ಎಂಬ ಯುವಕನಿಗೆ ಬೆಂಬಲ ನೀಡಿದರು. ಈ ವೇಳೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಏಕಾಂತಯ್ಯ ಅವರು, 30 ಜಿಲ್ಲೆಗಳ ವೀರಶೈವ ಮಹಾಸಭಾ ಸದಸ್ಯರು ಚಿತ್ರದುರ್ಗದಲ್ಲಿ ಪಾದಯಾತ್ರೆ ನಡೆಸಿ ನಂತರ ಮುರುಘಾ ಮಠದ ಮುಂದೆ ಧರಣಿ ನಡೆಸಿ ನೂತನ ಮಠಾಧೀಶರ ನೇಮಕಕ್ಕೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಮಠಾಧೀಶರು ಮೂರು ತಿಂಗಳಿನಿಂದ ಜೈಲಿನಲ್ಲಿ ಇರುವುದರಿಂದ ಮಠದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳು ಹಾಗೂ ಮಠದ ವತಿಯಿಂದ ನಡೆಯುವ ಶಿಕ್ಷಣ ಸಂಸ್ಥೆಗಳ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಮಠದ ಕಾರ್ಯಚಟುವಟಿಕೆಗಳು ಸುಗಮವಾಗಿ ನಡೆಯಲು ನೂತನ ಮಠಾಧೀಶರ ಅವಶ್ಯಕತೆಯಿದೆ ಎಂದು ತಿಳಿಸಿದರು.

ಆಡಳಿತಾಧಿಕಾರಿ ನೇಮಕ ಮಾಡುವಂತೆ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಚಿತ್ರದುರ್ಗದ ವೀರಶೈವ ಮಹಾಸಭಾ ಕೂಡ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಾನೂನು ಮಾರ್ಗ ಅನುಸರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

3ನೇ ಆರೋಪಿಗೆ ಮಧ್ಯಂತರ ಜಾಮೀನು ಮಂಜೂರು
ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಗೆ ಜಾಮೀನು ಮಂಜೂರಾಗಿದೆ.

ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಮುರುಘಾಮಠದ ಉತ್ತರಾಧಿಕಾರಿ ಬಸವಾದಿತ್ಯಗೆ ಚಿತ್ರದುರ್ಗ ಬಾಲ ನ್ಯಾಯ ಮಂಡಳಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಅಕ್ಟೋಬರ್ 13 ರಂದು  2ನೇ ಪೋಕ್ಸೋ ಪ್ರಕರಣ  ದಾಖಲಾಗಿತ್ತು. 2ನೇ ಪ್ರಕರಣದಲ್ಲೂ ಬಸವಾದಿತ್ಯ 3ನೇ ಆರೋಪಿಯಾಗಿದ್ದು, ಮೊದಲ ಪ್ರಕರಣದಲ್ಲಿ ಈಗಾಗಲೇ ಜಾಮೀನು ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT