ಸಚಿವ ವಿ. ಸೋಮಣ್ಣ ಅವರೊಂದಿಗೆ ಶಾಸಕ ಜಮೀರ್ ಅಹ್ಮದ್ ಖಾನ್ 
ರಾಜ್ಯ

ಬೆಂಗಳೂರು: ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಪಾದರಾಯನಪುರ ಮುಖ್ಯರಸ್ತೆ ಅಗಲೀಕರಣ- ವಿ. ಸೋಮಣ್ಣ

ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಪಾದರಾಯನಪುರ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು  ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. 

ಬೆಂಗಳೂರು:  ಸುಮಾರು 240 ಕೋಟಿ ರೂ. ವೆಚ್ಚದಲ್ಲಿ ಪಾದರಾಯನಪುರ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಯನ್ನು ಪ್ರಾರಂಭಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು  ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. 

ವಿಧಾನಸೌಧದಲ್ಲಿಂದು ನಡೆದ  ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿರ್ಸಿ ವೃತ್ತ(ಬಿನ್ನಿಮಿಲ್ ಟ್ಯಾಂಕ್ ಬಂಡ್ ರಸ್ತೆ)ದಿಂದ ವಿಜಯನಗರ ಪೈಪ್ ಲೈನ್ ವರೆಗೆ ಒಟ್ಟು 1.8 ಕಿ.ಮೀ ಉದ್ದದ ಪಾದರಾಯನಪುರ ಮುಖ್ಯ ರಸ್ತೆಯನ್ನು ಅಗಲೀಕರಣ ಮಾಡುವ ಸಲುವಾಗಿ ಪಾಲಿಕೆಯ ಅಭಿಯಂತರರು, ನಗರ ಯೋಜನೆ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಗಳ ಜೊತೆ ಸಭೆ ನಡೆಸಲಾಯಿತು ಎಂದು ಹೇಳಿದರು. 

ಪಾದರಾಯನಪುರ ರಸ್ತೆ ಅಗಲೀಕರಣದಲ್ಲಿ ಯಾವುದೇ ಧಾರ್ಮಿಕ ಸ್ಥಳಗಳಿಗೆ ಧಕ್ಕೆಯಾಗದಂತೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ರಸ್ತೆ ಅಗಲೀಕರಣ ಮಾಡುವ ವಿಚಾರವಾಗಿ 2017ರಲ್ಲಿ ಟಿಡಿಆರ್ ನೀಡಲು ಸ್ಥಳೀಯರಲ್ಲಿ ಒಪ್ಪಿಸಲಾಗಿತ್ತು. ಆದರೆ ಟಿಡಿಆರ್ ಬಗ್ಗೆ ಜನರಲ್ಲಿ ಸಾಕಷ್ಟು ಗೊಂದಲಗಳಿರುವುದರಿಂದ ಸುಪ್ರೀಂ ಕೋರ್ಟ್ ನ ಸೂಚನೆಯ ಮೇರೆಗೆ ಪ್ರಸ್ತುತವಿರುವ ದರದಂತೆ ಸ್ಥಳೀಯರಿಗೆ ಪರಿಹಾರದ ಮೊತ್ತವನ್ನು ನೀಡಲಾಗುವುದು ಎಂದರು.

ಬಡ ವರ್ಗದ ಜನ ವಾಸಿಸುವ ಸ್ಥಳದಲ್ಲಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಬೇಕಾದರೆ ಹಾಗೂ ನಾಗರಿಕತೆಯನ್ನು ಹೆಚ್ಚಿನ ಮಟ್ಟಕ್ಕೆ ಕೊಂಡಯ್ಯಬೇಕಾದರೆ ರಸ್ತೆಗಳು ಹಾಗೂ ಮೂಲಭೂತಸೌಕರ್ಯ ಅತ್ಯಗತ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪಾದರಾಯನಪುರ ರಸ್ತೆ ಅಗಲೀಕರಣ ಮಾಡಿದಲ್ಲಿ ಸ್ಥಳೀಯ ಪ್ರದೇಶ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇದರಿಂದ ಚಾಮರಾಜಪೇಟೆ, ವಿಜಯನಗರ ಹಾಗೂ ಗೋವಿಂದರಾಜನಗರದ ಸುತ್ತಮುತ್ತಲಿನ ಜನಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದು ಹೇಳಿದರು. 

ಒಂದು ತಿಂಗಳಲ್ಲಿ ಎಲ್ಲಾ ಪ್ರಕ್ರಿಯೆ ಪೂರ್ಣ: ಪಾದರಾಯನಪುರ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಕ್ರಿಯೆಗಳನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಕೆಲಸ ಪ್ರಾರಂಭಿಸಲಾಗುವುದು. ಆ ಬಳಿಕ ಖಾಸಗಿ ಸ್ವತ್ತುಗಳ ಮಾಲೀಕರಿಗೆ ಸೂಕ್ತ ಪರಿಹಾರವನ್ನು ಹಂತ-ಹಂತವಾಗಿ ನೀಡಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel