ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಕಾನೂನು ಉಲ್ಲಂಘನೆ ಮಾಡಿದರೆ ಮಹಾರಾಷ್ಟ್ರ ಸಚಿವರ ಮೇಲೂ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಮಹಾರಾಷ್ಟ್ರ ರಾಜ್ಯ ಸಚಿವರು ಬೆಳಗಾವಿಗೆ ಭೇಟಿ ನೀಡಿ ಕಾನೂನು ಉಲ್ಲಂಘನೆ ಮಾಡಿದರೆ ಅವರ ವಿರುದ್ಧವೂ ಕ್ರಮ ತೆಗೆದುಕೊಳ್ಳುತ್ತೇವೆಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿಗೆ ಆಗಮಿಸುತ್ತಿರೋ ಮಹಾರಾಷ್ಟ್ರದ ಸಚಿವರ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಅವರ ಮೇಲೆ ಕ್ರಮ ತಗೋತೀವಿ. ಅವರು ಸಚಿವರು ಆದರೂ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಸಿಎಂ ಅವರು ಇದರ ಬಗ್ಗೆ ಸಂಪೂರ್ಣವಾಗಿ ಹೇಳಿದ್ದಾರೆ. ನಮ್ಮ ರಾಜ್ಯ-ಮಹಾರಾಷ್ಟ್ರದ ಡಿಜಿಗಳು, ಎಡಿಜಿಪಿಗಳ ಸಭೆ ನಡೆದಿದೆ. ಇದೀಗ ಭಾವನಾತ್ಮಕವಾಗಿ ಏನಾದರೂ ಕೆಣಕಲು ಬಂದರೆ ನಾವು ಬಿಡುವುದಿಲ್ಲ. ಈ ಬಗ್ಗೆ ಪೊಲೀಸರು ಎರಡು ಭಾಗದ ಜನರಿಗೆ ಎಚ್ಚರಿಕೆ ನೀಡಿದ್ದಾರೆಂದು ತಿಳಿಸಿದರು.

ಕೋರ್ಟ್ ನಲ್ಲಿ ಪ್ರಕರಣವಿದೆ. ಹೀಗಿರುವಾಗ ಅನಾವಶ್ಯಕ ಗೊಂದಲ, ಶಾಂತಿ ಸುವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ. ನೆಲ ಜಲ, ಭಾಷೆ ಬಗ್ಗೆ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ. ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬಂದಿದ್ದೇ ಆದರೆ, ಅವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳಬೇಕೆಂಬುದರ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಮಾತುಕತೆ ನಡೆಸುತ್ತೇನೆ ಎಂದರು.

ಬೆಳಗಾವಿ ಈಗ ಶಾಂತಿಯುತವಾಗಿದೆ. ಅದನ್ನ ಹಾಳು ಮಾಡಬಾರದು. ಅದು ಯುದ್ದ ರಂಗ ಅಲ್ಲ. ಎಲ್ಲರೂ ಶಾಂತವಾಗಿರಬೇಕು. ಇಲ್ಲಿಂದ ಅಲ್ಲಿಗೆ ಜನರು ಹೋಗಿ, ಅಲ್ಲಿಂದ ಇಲ್ಲಿಗೆ ಜನರು ಬಂದು ಕುಸ್ತಿ ಆಡಬಾರದು. ನೆಲ, ಜಲ, ಭಾಷೆಗೆ ನಮ್ಮ ಬದ್ಧತೆ ಇದೆ. ಯಾರೇ ಕಾನೂನು ಉಲ್ಲಂಘನೆ ಮಾಡಿದರೂ ಕ್ರಮ ಕೈಗೊಳ್ಳುತ್ತೇವೆಂದು ಎಚ್ಚರಿಸಿದ್ದಾರೆ.

ನಮ್ಮ ಮುಖ್ಯ ಕಾರ್ಯದರ್ಶಿಗಳು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಎರಡು ರಾಜ್ಯಗಳು ಶಾಂತಿ ಸುವ್ಯವಸ್ಥೆ ಕಾಪಾಡಲು ನಾನೂ ಮನವಿ ಮಾಡುತ್ತೇನೆ. ಬೆಳಗಾವಿ ರಣರಂಗ ಆಗಬಾರದು. ಅದಕ್ಕೆ ನಾವು ಅವಕಾಶ ಕೊಡೊಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT