ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅಪಹರಿಸಿ ದರೋಡೆ ಮಾಡಿದ ಪ್ರಕರಣದಲ್ಲಿ ನಾಲ್ವರ ಬಂಧನ

ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಅಪಹರಿಸಿ 8 ಲಕ್ಷ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಅಪಹರಿಸಿ 8 ಲಕ್ಷ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತರುಣ್ ನಾಗೇಶ್ (22), ವಿಘ್ನೇಶ್ (23), ಚರೀಶ್ ಜೆ (23) ಮತ್ತು ಮಣಿಕಂಠ (21) ಎಂದು ಗುರುತಿಸಲಾಗಿದೆ.

ಹೂಡಿಯಲ್ಲಿ ವಾಸವಾಗಿದ್ದ ಗುಜರಾತ್ ಮೂಲದ ರಾಹುಲ್ ವಿರಾಡಿಯಾ (35) ಅವರು ನವೆಂಬರ್ 26ರ ಮುಂಜಾನೆ ಕಲ್ಯಾಣ್ ನಗರದಲ್ಲಿ ಕಾರನ್ನು ನಿಲ್ಲಿಸಿ ಆಟೋರಿಕ್ಷಾದಲ್ಲಿ ‘ಮನೋರಂಜನೆಗಾಗಿ’ ಬ್ರಿಗೇಡ್ ರಸ್ತೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಿಗೇಡ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಕೆಲವು ಫೋಟೋಗಳನ್ನು ತೋರಿಸಿದ್ದಾರೆ. ಆದರೆ, ದೂರುದಾರರು ಅವರಿಗೆ ‘ಇಲ್ಲ’ ಎಂದು ಹೇಳಿ ಅದೇ ಆಟೋದಲ್ಲಿ ವಾಪಸ್ ಹೋಗಿದ್ದಾರೆ. ಆದರೆ, ಅವರನ್ನು ಹಿಂಬಾಲಿಸುತ್ತಿರುವ ಕಾರನ್ನು ಕಂಡು ಚಾಲಕನನ್ನು ವೇಗಗೊಳಿಸಲು ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಹೋಗಲು ಹೇಳಿದ್ದಾರೆ. ಆದರೆ, ಅಶೋಕ್ ನಗರದ ಸೆಂಟ್ರಲ್ ಮಾಲ್ ಬಳಿ ಕಾರು ಆಟೋವನ್ನು ಅಡ್ಡಗಟ್ಟಿದೆ ಮತ್ತು ಮತ್ತು ದುಷ್ಕರ್ಮಿಗಳು ಕಾರಿನಲ್ಲಿದ್ದವರನ್ನು ಅಪಹರಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಟಿ ಬಳಿ ಅವರ ಚಿನ್ನದ ಸರವನ್ನು ದೋಚಲಾಗಿದ್ದು, ಅಪಹರಣಕಾರರು ಅವರ ಡೆಬಿಟ್ ಕಾರ್ಡ್ ಬಳಸಿ ಎಟಿಎಂಗಳಿಂದ ಹಣವನ್ನು ಡ್ರಾ ಮಾಡಿದ್ದಾರೆ. ಸಂತ್ರಸ್ತನ ಸಹೋದರ ಕೂಡ 2 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿದ್ದು, ಅದನ್ನು ಅಪಹರಣಕಾರರು ಹಿಂಪಡೆದಿದ್ದಾರೆ. ನಂತರ ಆತನನ್ನು ಕಲ್ಯಾಣ್ ನಗರದಲ್ಲಿ ಬಿಡಲಾಯಿತು' ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT