ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಅಪಹರಿಸಿ ದರೋಡೆ ಮಾಡಿದ ಪ್ರಕರಣದಲ್ಲಿ ನಾಲ್ವರ ಬಂಧನ

ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಅಪಹರಿಸಿ 8 ಲಕ್ಷ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರ್‌ನನ್ನು ಅಪಹರಿಸಿ 8 ಲಕ್ಷ ರೂಪಾಯಿ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಯುವಕರನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತರುಣ್ ನಾಗೇಶ್ (22), ವಿಘ್ನೇಶ್ (23), ಚರೀಶ್ ಜೆ (23) ಮತ್ತು ಮಣಿಕಂಠ (21) ಎಂದು ಗುರುತಿಸಲಾಗಿದೆ.

ಹೂಡಿಯಲ್ಲಿ ವಾಸವಾಗಿದ್ದ ಗುಜರಾತ್ ಮೂಲದ ರಾಹುಲ್ ವಿರಾಡಿಯಾ (35) ಅವರು ನವೆಂಬರ್ 26ರ ಮುಂಜಾನೆ ಕಲ್ಯಾಣ್ ನಗರದಲ್ಲಿ ಕಾರನ್ನು ನಿಲ್ಲಿಸಿ ಆಟೋರಿಕ್ಷಾದಲ್ಲಿ ‘ಮನೋರಂಜನೆಗಾಗಿ’ ಬ್ರಿಗೇಡ್ ರಸ್ತೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬ್ರಿಗೇಡ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಕೆಲವು ಫೋಟೋಗಳನ್ನು ತೋರಿಸಿದ್ದಾರೆ. ಆದರೆ, ದೂರುದಾರರು ಅವರಿಗೆ ‘ಇಲ್ಲ’ ಎಂದು ಹೇಳಿ ಅದೇ ಆಟೋದಲ್ಲಿ ವಾಪಸ್ ಹೋಗಿದ್ದಾರೆ. ಆದರೆ, ಅವರನ್ನು ಹಿಂಬಾಲಿಸುತ್ತಿರುವ ಕಾರನ್ನು ಕಂಡು ಚಾಲಕನನ್ನು ವೇಗಗೊಳಿಸಲು ಮತ್ತು ಹತ್ತಿರದ ಪೊಲೀಸ್ ಠಾಣೆಗೆ ಹೋಗಲು ಹೇಳಿದ್ದಾರೆ. ಆದರೆ, ಅಶೋಕ್ ನಗರದ ಸೆಂಟ್ರಲ್ ಮಾಲ್ ಬಳಿ ಕಾರು ಆಟೋವನ್ನು ಅಡ್ಡಗಟ್ಟಿದೆ ಮತ್ತು ಮತ್ತು ದುಷ್ಕರ್ಮಿಗಳು ಕಾರಿನಲ್ಲಿದ್ದವರನ್ನು ಅಪಹರಿಸಿದ್ದಾರೆ.

ಎಲೆಕ್ಟ್ರಾನಿಕ್ಸ್ ಸಿಟಿ ಬಳಿ ಅವರ ಚಿನ್ನದ ಸರವನ್ನು ದೋಚಲಾಗಿದ್ದು, ಅಪಹರಣಕಾರರು ಅವರ ಡೆಬಿಟ್ ಕಾರ್ಡ್ ಬಳಸಿ ಎಟಿಎಂಗಳಿಂದ ಹಣವನ್ನು ಡ್ರಾ ಮಾಡಿದ್ದಾರೆ. ಸಂತ್ರಸ್ತನ ಸಹೋದರ ಕೂಡ 2 ಲಕ್ಷ ರೂ.ಗಳನ್ನು ವರ್ಗಾವಣೆ ಮಾಡಿದ್ದು, ಅದನ್ನು ಅಪಹರಣಕಾರರು ಹಿಂಪಡೆದಿದ್ದಾರೆ. ನಂತರ ಆತನನ್ನು ಕಲ್ಯಾಣ್ ನಗರದಲ್ಲಿ ಬಿಡಲಾಯಿತು' ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಡಿಕೆ ಶಿವಕುಮಾರ್ ಪತ್ರ!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video