ಸಂಗ್ರಹ ಚಿತ್ರ 
ರಾಜ್ಯ

ದಂಡ ಮನ್ನಾ ಮಾಡಿ, ಬಾಡಿಗೆ ಪಡೆಯಿರಿ: ಬಿಬಿಎಂಪಿಗೆ ಶಿವಾಜಿನಗರದ ವ್ಯಾಪಾರಿಗಳ ಮನವಿ

ಶಿವಾಜಿನಗರ ಮಾರುಕಟ್ಟೆಗಳಲ್ಲಿ ಬಾಡಿಗೆ ಹಾಗೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ನೋಟಿಸ್‌ ಪಡೆದಿರುವ ವ್ಯಾಪಾರಿಗಳು ಇದೀಗ ದಂಡವನ್ನು ಮನ್ನಾ ಮಾಡಿ ಬಾಡಿಗೆ ಮಾತ್ರ ವಸೂಲಿ ಮಾಡುವಂತೆ ಬಿಬಿಎಂಪಿ ವಲಯ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರು: ಶಿವಾಜಿನಗರ ಮಾರುಕಟ್ಟೆಗಳಲ್ಲಿ ಬಾಡಿಗೆ ಹಾಗೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ನೋಟಿಸ್‌ ಪಡೆದಿರುವ ವ್ಯಾಪಾರಿಗಳು ಇದೀಗ ದಂಡವನ್ನು ಮನ್ನಾ ಮಾಡಿ ಬಾಡಿಗೆ ಮಾತ್ರ ವಸೂಲಿ ಮಾಡುವಂತೆ ಬಿಬಿಎಂಪಿ ವಲಯ ಆಯುಕ್ತರಿಗೆ ಮನವಿ ಮಾಡಿದ್ದಾರೆ.

ಕೋವಿಡ್ -19-ಪ್ರೇರಿತ ಲಾಕ್‌ಡೌನ್‌ನಿಂದಾಗಿ ಭಾರಿ ನಷ್ಟಗಳು ಎದುರಾಗಿತ್ತು. ಹೀಗಾಗಿ ಬಾಡಿಗೆಯನ್ನು ಪಾವತಿಸಲು ಸಾಧ್ಯವಾಗಲಿಲ್ಲ ಎಂದು ಅನೇಕ ವ್ಯಾಪಾರಿಗಳು ಹೇಳಿದ್ದಾರೆ.

ಪೂರ್ವ ವಲಯದ ವಿಶೇಷ ಆಯುಕ್ತ ಪಿಎನ್ ರವೀಂದ್ರ ಅವರು ಮಾತನಾಡಿ, ಸುಮಾರು 3 ಕೋಟಿ ರೂಪಾಯಿ ಬಾಕಿ ಇದೆ ಎಂದು ಹೇಳಿದ್ದಾರೆ.

ದಂಡವನ್ನು ಮನ್ನಾ ಮಾಡುವಂತೆ ಪಾಲಿಕೆಯ ಮುಂದೆ ವ್ಯಾಪಾರಸ್ಥರು ಮನವಿ ಇರಿಸಿದ್ದಾರೆ. ಇದನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಒಪ್ಪಿಗೆಗಾಗಿ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ.

ರಸೆಲ್‌ ಮಾರುಕಟ್ಟೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್‌ ಇದ್ರೀಸ್‌ ಚೌದ್ರಿ ಮಾತನಾಡಿ, 470 ಅಂಗಡಿಗಳಿರುವ ರಸೆಲ್‌ ಮಾರುಕಟ್ಟೆ ಸಂಕೀರ್ಣದಿಂದ ಸಂಜೆ ಬಜಾರ್‌, ನಾಲಾ ಮಾರುಕಟ್ಟೆ, ದನದ ಮಾರುಕಟ್ಟೆ, ಬೋಟಿ ಮಾರುಕಟ್ಟೆಯ ಜತೆಗೆ ಮಟನ್‌ ಮಾರುಕಟ್ಟೆ ವ್ಯಾಪಾರಿಗಳ ಬಾಡಿಗೆ ಮಾತ್ರ ಬಾಕಿ ಇದೆ. ರಿಚರ್ಡ್ ಸ್ಕ್ವೇರ್ ಮಾರುಕಟ್ಟೆ ಮತ್ತು ಮೀನು ಮಾರುಕಟ್ಟೆಯ ವ್ಯಾಪಾರಸ್ಥರು ತಮ್ಮ ದಂಡವನ್ನು ಮನ್ನಾ ಮಾಡುವಂತೆ ವಿಶೇಷ ಆಯುಕ್ತರು ಮತ್ತು ಶಾಸಕ ರಿಜ್ವಾನ್ ಅರ್ಷದ್ ಇಬ್ಬರಿಗೂ ಮನವಿ ಮಾಡಿದ್ದಾರೆಂದು ಹೇಳಿದ್ದಾರೆ.

ರಿಜ್ವಾನ್ ಅರ್ಷದ್ ಅವರು ಪ್ರತಿಕ್ರಿಯೆ ನೀಡಿ, ಅಧಿಕಾರಿಗಳೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ.

“ಸಾಂಕ್ರಾಮಿಕ ರೋಗ ಮತ್ತು ಲಾಕ್‌ಡೌನ್ ವ್ಯಾಪಾರಿಗಳಿಗೆ ಭಾರಿ ಹೊಡೆತವನ್ನು ನೀಡಿದೆ, ಇದರಿಂದಾಗಿ ಹಲವರು ಬಾಡಿಗೆ ಕಟ್ಟಲು ಸಾಧ್ಯವಾಗಿಲ್ಲ. ಇದೀಗ ವ್ಯಾಪಾರಗಳು ಮತ್ತೆ ಚುರುಕುಗೊಂಡಿದ್ದು, ಬಾಡಿಗೆ ಕಟ್ಟಲು ಮುಂದೆ ಬಂದಿದ್ದಾರೆ. ಅವರಿಗೆ ಬಿಬಿಎಂಪಿ ಸಹಾಯ ಮಾಡಬೇಕೆಂದು ರಿಜ್ವಾನ್ ಅರ್ಷದ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!