ಸಿಎಂ ಬೊಮ್ಮಾಯಿ 
ರಾಜ್ಯ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ- ಸಿಎಂ ಬೊಮ್ಮಾಯಿ

ಗಡಿ ವಿವಾದವನ್ನು ಮಹಾರಾಷ್ಟ್ರ ರಾಜ್ಯ ಹುಟ್ಟುಹಾಕಿದ್ದು, ಈ ಸಂಬಂಧದ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಬೆಂಗಳೂರು: ಗಡಿ ವಿವಾದವನ್ನು ಮಹಾರಾಷ್ಟ್ರ ರಾಜ್ಯ ಹುಟ್ಟುಹಾಕಿದ್ದು, ಈ ಸಂಬಂಧದ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾಸ ನಮಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅಂಬೇಡ್ಕರ್ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ನಮ್ಮ ಗಡಿ ಮತ್ತು ಜನರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ. ಅಷ್ಟೇ ಅಲ್ಲ ಮಹಾರಾಷ್ಟ್ರ, ಕೇರಳ, ತೆಲಂಗಾಣದಲ್ಲಿರುವ ಕನ್ನಡಿಗರ ರಕ್ಷಣೆಗೂ ಬದ್ಧರಾಗಿದ್ದೇವೆಂದು ಹೇಳಿದ್ದಾರೆ.

ಸರ್ಕಾರದ ಈ ನಿಲುವಿಗೂ ಚುನಾವಣೆಗೂ ಯಾವುದೇ ಸಂಬಂಧವಿಲ್ಲ, ಇದು ಮಹಾರಾಷ್ಟ್ರದ ದೀರ್ಘಾವಧಿಯ ವಿಷಯವಾಗಿದೆ. ಮಹಾರಾಷ್ಟ್ರದಿಂದಾಗಿ ಈ ವಿವಾದ ಸೃಷ್ಟಿಯಾಗಿದೆ. ಎರಡೂ ರಾಜ್ಯಗಳ ಜನರಲ್ಲಿ ಸಮನ್ವಯತೆ ಇದೆ, ಇದೀಗ ಗಡಿ ವಿವಾದ ಸುಪ್ರೀಂಕೋರ್ಟ್ ನಲ್ಲಿದ್ದು, ಈ ಕಾನೂನು ಹೋರಾಟದಲ್ಲಿ ಗೆಲ್ಲುವ ವಿಶ್ವಾನ ನನಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!