ದತ್ತ ಜಯಂತಿಯ ಹಿನ್ನೆಲೆಯಲ್ಲಿ ಸೋಮವಾರ ಚಿಕ್ಕಮಗಳೂರಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. 
ರಾಜ್ಯ

ದತ್ತ ಜಯಂತಿ: ಇಬ್ಬರು ಹಿಂದೂ ಅರ್ಚಕರ ನೇಮಿಸಿದ ಸರ್ಕಾರ

ಚಿಕ್ಕಮಗಳೂರಿನ ಬಾಬಾ ಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಡಿಸೆಂಬರ್‌ 6ರಿಂದ 8ರವರೆಗೆ ದತ್ತ ಜಯಂತಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಡಿಸೆಂಬರ್‌ 6ರಿಂದ 8ರವರೆಗೆ ದತ್ತ ಜಯಂತಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯವರಾದ ಆಗಮೋಕ್ತದಲ್ಲಿ ಪಾರಂಗತರಾದ ಡಾ.ಸಂದೀಪ್ ಶರ್ಮಾ ಮತ್ತು ಶ್ರೀಧರ್ ಭಟ್ ಅರ್ಚಕರಾಗಿ ನೇಮಕಗೊಂಡಿದ್ದಾರೆ.

ಸಂದೀಪ್ ಶರ್ಮಾ ಅವರು ಮಂಗಳವಾರದಿಂದ ಪೀಠದಲ್ಲಿ ದತ್ತ ಜಯಂತಿಯ ಧಾರ್ಮಿಕ ಆಚರಣೆಗಳನ್ನು ಪ್ರಾರಂಭಿಸುತ್ತಾರೆ, ದತ್ತ ಪಾದುಕೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಮತ್ತು ಕೊನೆಯ ದಿನದಂದು ಹೋಮ ಮತ್ತು ಹವನವನ್ನು ಮಾಡುತ್ತಾರೆ.

ಈ ಕುರಿತು ಬಜರಂಗದಳದ ಕಾರ್ಯಕರ್ತ ರಘು ಸಕಲೇಶಪುರ ಮಾತನಾಡಿ, ಇದು ನಾಲ್ಕು ದಶಕಗಳ ಹೋರಾಟಕ್ಕೆ ಸಂದ ಜಯವಾಗಿದ್ದು, ದತ್ತ ಜಯಂತಿ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಅರ್ಚಕರನ್ನು ನೇಮಿಸುವ ಬದಲು ಕಾಯಂ ಆಗಿ ನೇಮಿಸುವಂತೆ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ದತ್ತಪೀಠದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಮುಸ್ಲಿಂ ಅರ್ಚಕರು ಮಾಡಲು ಪಡೆಯಲು ಸಾಧ್ಯವಿಲ್ಲ, ಆದ್ದರಿಂದ ರಾಜ್ಯ ಸರ್ಕಾರವು ಹಿಂದೂ ಸಮಾಜದ ಆಶಯಕ್ಕೆ ಮಣಿದು ಹಿಂದೂ ಅರ್ಚಕರನ್ನು ನೇಮಿಸಿದೆ. ದತ್ತ ದೇವರಿಗೆ ಹಾಗೂ ಜಿಲ್ಲೆಯ ಜನತೆಗೆ ಹಿಂದಿನ ಕಾಂಗ್ರೆಸ್ ಸರಕಾರ ಅನ್ಯಾಯ ಮಾಡಿದ್ದರೂ ಬಿಜೆಪಿ ಸರಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದರು.

ಈ ನಡುವೆ ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕ ಕುರಿತು ವಿಎಚ್​ಪಿ, ಬಜರಂಗದಳದ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದವು. ನಗರದ ಆಜಾದ್ ಪಾರ್ಕ್​ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಎಚ್​ಪಿ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT