ದತ್ತ ಜಯಂತಿಯ ಹಿನ್ನೆಲೆಯಲ್ಲಿ ಸೋಮವಾರ ಚಿಕ್ಕಮಗಳೂರಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. 
ರಾಜ್ಯ

ದತ್ತ ಜಯಂತಿ: ಇಬ್ಬರು ಹಿಂದೂ ಅರ್ಚಕರ ನೇಮಿಸಿದ ಸರ್ಕಾರ

ಚಿಕ್ಕಮಗಳೂರಿನ ಬಾಬಾ ಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಡಿಸೆಂಬರ್‌ 6ರಿಂದ 8ರವರೆಗೆ ದತ್ತ ಜಯಂತಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿದೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್​ಗಿರಿಯ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಡಿಸೆಂಬರ್‌ 6ರಿಂದ 8ರವರೆಗೆ ದತ್ತ ಜಯಂತಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದತ್ತಪೀಠಕ್ಕೆ ಇಬ್ಬರು ಹಿಂದೂ ಅರ್ಚಕರನ್ನು ನೇಮಕ ಮಾಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯವರಾದ ಆಗಮೋಕ್ತದಲ್ಲಿ ಪಾರಂಗತರಾದ ಡಾ.ಸಂದೀಪ್ ಶರ್ಮಾ ಮತ್ತು ಶ್ರೀಧರ್ ಭಟ್ ಅರ್ಚಕರಾಗಿ ನೇಮಕಗೊಂಡಿದ್ದಾರೆ.

ಸಂದೀಪ್ ಶರ್ಮಾ ಅವರು ಮಂಗಳವಾರದಿಂದ ಪೀಠದಲ್ಲಿ ದತ್ತ ಜಯಂತಿಯ ಧಾರ್ಮಿಕ ಆಚರಣೆಗಳನ್ನು ಪ್ರಾರಂಭಿಸುತ್ತಾರೆ, ದತ್ತ ಪಾದುಕೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಮತ್ತು ಕೊನೆಯ ದಿನದಂದು ಹೋಮ ಮತ್ತು ಹವನವನ್ನು ಮಾಡುತ್ತಾರೆ.

ಈ ಕುರಿತು ಬಜರಂಗದಳದ ಕಾರ್ಯಕರ್ತ ರಘು ಸಕಲೇಶಪುರ ಮಾತನಾಡಿ, ಇದು ನಾಲ್ಕು ದಶಕಗಳ ಹೋರಾಟಕ್ಕೆ ಸಂದ ಜಯವಾಗಿದ್ದು, ದತ್ತ ಜಯಂತಿ ಸಂದರ್ಭದಲ್ಲಿ ತಾತ್ಕಾಲಿಕವಾಗಿ ಅರ್ಚಕರನ್ನು ನೇಮಿಸುವ ಬದಲು ಕಾಯಂ ಆಗಿ ನೇಮಿಸುವಂತೆ ಸರಕಾರ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಶಾಸಕ ಸಿ.ಟಿ.ರವಿ ಮಾತನಾಡಿ, ದತ್ತಪೀಠದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ಮುಸ್ಲಿಂ ಅರ್ಚಕರು ಮಾಡಲು ಪಡೆಯಲು ಸಾಧ್ಯವಿಲ್ಲ, ಆದ್ದರಿಂದ ರಾಜ್ಯ ಸರ್ಕಾರವು ಹಿಂದೂ ಸಮಾಜದ ಆಶಯಕ್ಕೆ ಮಣಿದು ಹಿಂದೂ ಅರ್ಚಕರನ್ನು ನೇಮಿಸಿದೆ. ದತ್ತ ದೇವರಿಗೆ ಹಾಗೂ ಜಿಲ್ಲೆಯ ಜನತೆಗೆ ಹಿಂದಿನ ಕಾಂಗ್ರೆಸ್ ಸರಕಾರ ಅನ್ಯಾಯ ಮಾಡಿದ್ದರೂ ಬಿಜೆಪಿ ಸರಕಾರ ಕೊಟ್ಟ ಭರವಸೆಯನ್ನು ಈಡೇರಿಸಿದೆ ಎಂದು ಹೇಳಿದರು.

ಈ ನಡುವೆ ದತ್ತಾತ್ರೇಯ ಪೀಠದಲ್ಲಿ ಅರ್ಚಕರ ನೇಮಕ ಕುರಿತು ವಿಎಚ್​ಪಿ, ಬಜರಂಗದಳದ ಕಾರ್ಯಕರ್ತರು ಸೋಮವಾರ ಸಂಭ್ರಮಾಚರಣೆ ನಡೆಸಿದವು. ನಗರದ ಆಜಾದ್ ಪಾರ್ಕ್​ನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಎಚ್​ಪಿ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT