ಸಂಗ್ರಹ ಚಿತ್ರ 
ರಾಜ್ಯ

ಕಬ್ಬಿನ ಉಪ ಉತ್ಪನ್ನದ ಲಾಭಾಂಶ ರೈತರಿಗೆ ನೀಡಲು ಸರ್ಕಾರ ಮುಂದು!

ಕಬ್ಬಿನ ಉಪ ಉತ್ಪನ್ನ ಎಥೆನಾಲ್‌ ಮೇಲಿನ ಲಾಭಾಂಶವನ್ನು ರೈತರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಬಂಪರ್‌ ಕೊಡುಗೆ ಘೋಷಿಸಿದೆ.

ಬೆಂಗಳೂರು: ಕಬ್ಬಿನ ಉಪ ಉತ್ಪನ್ನ ಎಥೆನಾಲ್‌ ಮೇಲಿನ ಲಾಭಾಂಶವನ್ನು ರೈತರಿಗೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತದಲ್ಲಿ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ಬಂಪರ್‌ ಕೊಡುಗೆ ಘೋಷಿಸಿದೆ.

ವಿಕಾಸಸೌಧದಲ್ಲಿ ಸೋಮವಾರ ನಡೆದ ಕಬ್ಬು ನಿಯಂತ್ರಣ ಮಂಡಳಿ ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ಸಕ್ಕರೆ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ ಅವರು ತಿಳಿಸಿದರು.

ಇಲ್ಲಿವರೆಗೆ ಸಕ್ಕರೆಯ ಉಪ ಉತ್ಪನ್ನಗಳ ಮೇಲೆ ಲಾಭಾಂಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ಕಬ್ಬಿನ ಉಪ ಉತ್ಪನ್ನದ ಮೇಲೆ ರೈತರಿಗೆ ಲಾಭಾಂಶ ನೀಡಲು ಕಬ್ಬು ನಿಯಂತ್ರಣ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಉಪ ಉತ್ಪನ್ನಗಳ ಲಾಭಾಂಶ ಬೇಕೆಂದು ಅನೇಕ ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದರು. ಅದರಂತೆ, ಮೊದಲ ಹಂತದಲ್ಲಿ ಕಬ್ಬಿನ ಉಪ ಉತ್ಪನ್ನ ಎಥೆನಾಲ್‌ ಮೇಲಿನ ಲಾಭ ನೀಡಲು ಸರ್ಕಾರ ಮುಂದಾಗಿದ್ದು, ಎಫ್ಆರ್‌ಪಿ ದರದ ಪಾವತಿ ಬಳಿಕ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 50 ರೂಪಾಯಿಯಂತೆ ಕಬ್ಬು ಬೆಳೆಗಾರರಿಗೆ 204.47 ಕೋಟಿ ರೂ. ನೀಡಲಾಗುತ್ತಿದೆ. ರಾಜ್ಯ ಸರ್ಕಾರದ ನಿರ್ಣಯದ ಕುರಿತು ತಕ್ಷಣ ಆದೇಶ ಹೊರಡಿಸುವಂತೆ ಕಬ್ಬು ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸಚಿವರ ಹೇಳಿಕೆ ಬೆನ್ನಲ್ಲೇ ರೈತ ಸಂಘವು ಉಪವಾಸ ಸತ್ಯಾಗ್ರವನ್ನು ಹಿಂಪಡೆದಿದೆ. ಆದರೆ, ಸಚಿವರ ಭರವಸೆ ನೀಡಿರುವ ಹಣವು ತೃಪ್ತಿ ತಂದಿಲ್ಲ ಎಂದು ಹೇಳಿದ್ದು, ಉಪವಾಸ ಬದಲಿಗೆ ಅಹೋರಾತ್ರಿ ಧರಣಿ ಮುಂದುವರೆಸುವುದಾಗಿ ತಿಳಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಸದಸ್ಯರು ಬೆಳೆಗಳಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆಗೆ ಒತ್ತಾಯಿಸಿ ಹಲವು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ನಡುವೆ ಕಬ್ಬಿನ ಉಪಉತ್ಪನ್ನಗಳ ಲಾಭದ ಹಂಚಿಕೆಯನ್ನು ಪರಿಶೀಲಿಸಲು ರಾಜ್ಯ ಸರ್ಕಾರವು ತಜ್ಞರ ಸಮಿತಿಯನ್ನು ರಚಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT