ಪ್ರತ್ಯಕ್ಷ ದೃಶ್ಯ 
ರಾಜ್ಯ

'ಲವ್ ಜಿಹಾದ್' ಎಂದು ಆರೋಪಿಸಿ ಹಿಂದೂ ಯುವತಿಯ ಪೋಷಕರ ಸಮ್ಮುಖದಲ್ಲೇ ಹಿಂದೂ ಕಾರ್ಯಕರ್ತರಿಂದ ಹಲ್ಲೆ

ಲವ್ ಜಿಹಾದ್ ಆರೋಪ ಮಾಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಲವ್ ಜಿಹಾದ್ ಆರೋಪ ಮಾಡಿ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ ಮೇಲೆ ಹಿಂದೂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.

ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಾಭರಣ ಅಂಗಡಿಯೊಂದರಲ್ಲಿ ಈ ಘಟನೆ ನಡೆದಿದೆ. ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ನಡೆಸಿದ್ದಾರೆ. ಮುಸ್ಲಿಂ ಯುವಕ ಮತ್ತು ಆತನ ಸಹೋದ್ಯೋಗಿ ಹಿಂದೂ ಮಹಿಳೆಯ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು ಮಹಿಳೆಯ ಪೋಷಕರ ಸಮ್ಮುಖದಲ್ಲಿ ಹಲ್ಲೆ ನಡೆಸಿದ್ದಾರೆ.

ಉಳ್ಳಾಲದ ಲುಕ್ಮಾನ್ ಎಂಬ ಮುಸ್ಲಿಂ ಯುವಕನ ಜೊತೆ ಶೃಂಗೇರಿ ಸಮೀಪದ ಕೊಪ್ಪ ನಿವಾಸಿ ಯುವತಿ ಸುತ್ತಾಡುತ್ತಿದ್ದು ಈ ಬಗ್ಗೆ ಪೋಷಕರಿಗೆ ಮಾಹಿತಿ ನೀಡಲಾಗಿತ್ತು.

ಮಂಗಳವಾರ ಸಂಜೆ 10ಕ್ಕೂ ಹೆಚ್ಚು ಹಿಂದುತ್ವ ಪರ ಕಾರ್ಯಕರ್ತರು ಚಿನ್ನಾಭರಣ ಅಂಗಡಿಗೆ ನುಗ್ಗಿ ಮುಸ್ಲಿಂ ಯುವಕನ ಮೇಲೆ 'ಲವ್ ಜಿಹಾದ್' ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ. ಇದೇ ಯುವತಿಯ ಮೇಲೂ ಹಲ್ಲೆ ನಡೆದಿದೆ ಎನ್ನಲಾಗಿದೆ. ಕದ್ರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಠಾಣೆಗೆ ಕರೆದೊಯ್ದಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ.

ಪೊಲೀಸ್ ಠಾಣೆಯಲ್ಲಿ ಈ ಸಂಬಂಧ 3 ಪ್ರಕರಣಗಳು ದಾಖಲಾಗಿದೆ ಎಂದು ಆಯುಕ್ತ ಶಶಿಕುಮಾರ್ ತಿಳಿಸಿದರು. ಸಂತ್ರಸ್ತ ಯುವಕ ಹಲ್ಲೆ ಮತ್ತು ಗಲಭೆಯ ಬಗ್ಗೆ ದೂರು ನೀಡಿದ್ದು, ಹಿಂದುತ್ವ ಪರ ಕಾರ್ಯಕರ್ತರು ಮತ್ತು ಯುವತಿಯ ಕುಟುಂಬದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಏತನ್ಮಧ್ಯೆ, ಮುಸ್ಲಿಂ ಯುವಕ ತನ್ನನ್ನು ನಿಂದಿಸಿದ್ದು ಅಲ್ಲದೆ ಗಂಭೀರ ಪರಿಣಾಮ ಬೀರುವ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯ ತಾಯಿ ದೂರಿದ್ದಾರೆ. ಇನ್ನು ಆಭರಣ ಅಂಗಡಿಯವರು ಅತಿಕ್ರಮಿಸಿ ಗಲಾಟೆ ಮಾಡಿದ್ದಾರೆ ಎಂದು ದೂರಿದ್ದಾರೆ. ಆದರೆ ಇಲ್ಲಿಯವರೆಗೂ ಈ ಸಂಬಂಧ ಇನ್ನೂ ಯಾರನ್ನು ಬಂಧಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT