ಮಾರತ್ತಹಳ್ಳಿ ಸೇತುವೆ ಮೇಲೆ ನಿಧಾನಗತಿಯ ಸಂಚಾರ 
ರಾಜ್ಯ

ಬೆಂಗಳೂರು: ಸುಗಮ ಸಂಚಾರಕ್ಕೆ ಮಾರತ್ತಹಳ್ಳಿಯಲ್ಲಿ ಕೆಳಸೇತುವೆ ನಿರ್ಮಾಣ!

ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ಬೆಂಗಳೂರು: ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾಹಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮಾರತ್ತಹಳ್ಳಿಯ ಹೊರ ವರ್ತುಲ ರಸ್ತೆಗೆ ಸಮಾನಾಂತರವಾಗಿರುವ ರೈಲ್ವೆ ಸೇತುವೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ಕೆಳಸೇತುವೆ ನಿರ್ಮಾಣ ಮಾಡುತ್ತಿದೆ.

ಈ ಕೆಳಸೇತುವೆ ಯೋಜನೆಯು ಕುಂದಲಹಳ್ಳಿ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚಾರವನ್ನು ಸುಗಮಗೊಳಿಸುವ ನಿರೀಕ್ಷೆಯಿದೆ.

ಯೋಜನೆಯಿಂದಾಗಿ 20-30 ದಿನಗಳ ಕಾಲ ಸಂಚಾರಕ್ಕೆ ತೊಂದರೆಯಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಅಧಿಕಾರಿಗಳಉ ಮನವಿ ಮಾಡಿಕೊಂಡಿದ್ದಾರೆ.

ರಸ್ತೆ ಮೂಲಭೂತ ಸೌಕರ್ಯ ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ವಿ.ಜಯಶಂಕರ ರೆಡ್ಡಿ ಅವರು ಮಾತನಾಡಿ, ಪ್ರಸ್ತುತ, ವಾಹನ ಸವಾರರು ಮುನ್ನೆಕೊಳಾಲ ಮತ್ತು ಇತರ ಪ್ರದೇಶಗಳಿಗೆ ಯು-ಟರ್ನ್ ತೆಗೆದುಕೊಳ್ಳಲು 1.5 ಕಿಮೀ ದೂರ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನ ಸವಾರರು ಕೆಳಸೇತುವೆಯನ್ನು ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.

ಈಗಾಗಲೇ ಒಂದು ಬದಿಯ ಕಾಮಗಾರಿ ಪೂರ್ಣಗೊಂಡಿದ್ದು, ಒಂದು ಮುಖ್ಯರಸ್ತೆ ವಾಹನ ಸವಾರರಿಗೆ ತೆರೆದಿರುವುದರಿಂದ ಈ ರಸ್ತೆಯಲ್ಲಿ ನಿಧಾನಗತಿಯ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಕಾಮಗಾರಿಯಿಂದಾಗಿ 20 ದಿನಗಳ ಕಾಲ ವಾಹನ ಸವಾರರಿಗೆ ಸಮಸ್ಯೆಗಳಾಗಬಹುದು, ಅಂಡರ್ ಪಾಸ್ ಕಾಮಗಾರಿ ಪೂರ್ಣಗೊಳ್ಳಲು 30 ದಿನ ಬೇಕು ಎಂದು ತಿಳಿಸಿದ್ದಾರೆ.

ಆರಂಭದಲ್ಲಿ  ಪಾಲಿಕೆ ಭೂಸ್ವಾಧೀನ ಸಮಸ್ಯೆಗಳನ್ನು ಎದುರಿಸಿತ್ತು. ಆದರೆ, ಮಹದೇವಪುರ ಶಾಸಕ ಅರವಿಂದ ಲಿಂಬಾವಳಿ ಮಧ್ಯೆ ಪ್ರವೇಶಿಸಿದ ಬಳಿಕ ಸಮಸ್ಯೆ ಬಗೆಹರಿದಿತ್ತು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT