ಸಂಗ್ರಹ ಚಿತ್ರ 
ರಾಜ್ಯ

ಗಡಿ ವಿವಾದಕ್ಕೆ ಹೊಸ ತಿರುವು: ಕರ್ನಾಟಕ ಸೇರಲು ಸೊಲ್ಲಾಪುರದ 11 ಗ್ರಾಮ ಪಂಚಾಯತ್‌ಗಳ ನಿರ್ಣಯ!

ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ 11 ಗ್ರಾಮ ಪಂಚಾಯತ್‌ಗಳು ಕರ್ನಾಟಕ ಸೇರುವ ಬಗ್ಗೆ ನಿರ್ಣಯ ಆಂಗೀಕರಿಸಿದ್ದು, ಈ ಬೆಳವಣಿಗೆಯು ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಹೊಸ ತಿರುವು ನೀಡಿದೆ.

ಕೊಲ್ಲಾಪುರ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ 11 ಗ್ರಾಮ ಪಂಚಾಯತ್‌ಗಳು ಕರ್ನಾಟಕ ಸೇರುವ ಬಗ್ಗೆ ನಿರ್ಣಯ ಆಂಗೀಕರಿಸಿದ್ದು, ಈ ಬೆಳವಣಿಗೆಯು ಕರ್ನಾಟಕ- ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಹೊಸ ತಿರುವು ನೀಡಿದೆ.

ಸೊಲ್ಲಾಪುರ ಜಿಲ್ಲಾಧಿಕಾರಿ ಕಚೇರಿ ಮೂಲಕ ಈ ಪಂಚಾಯತ್‌ಗಳು ಸರ್ಕಾರಕ್ಕೆ ಮನವಿ ಸಲ್ಲಿಸಿ, ಕರ್ನಾಟಕ ಸೇರಲು ನಿರಾಕ್ಷೇಪಣ ಪತ್ರ ನೀಡುವಂತೆಯೂ ಕೋರಿವೆ. ಪಂಚಾಯತ್‌ಗಳ ನಿರ್ಣಯದ ಪ್ರತಿ ಹಾಗೂ ಅರ್ಜಿ ತಮ್ಮ ಕಚೇರಿಗೆ ತಲುಪಿದೆ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇವುಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ವಿವರಿಸಿದ್ದಾರೆ.

ಅಕ್ಕಲಕೋಟ ತಾಲೂಕಿನ ಅಳ್ಗೆ ಹಾಗೂ ಇನ್ನೂ 10 ಗ್ರಾಮಗಳ ನಿವಾಸಿಗಳು ಇತ್ತೀಚೆಗೆ ಸೊಲ್ಲಾಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಶಿಕ್ಷಣ ಮತ್ತು ಇತರ ಸೌಲಭ್ಯಗಳ ನೀಡುವಲ್ಲಿ ಮಹಾರಾಷ್ಟ್ರ ಸರ್ಕಾರ ವಿಫಲವಾಗಿದೆ. ನಮ್ಮ ಗ್ರಾಮಗಳು ಯಾವುದೇ ಅಭಿವೃದ್ಧಿ ಕಾಣದೆ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಗಡಿಯಾಚೆಗಿನ ಗ್ರಾಮಗಳನ್ನು ಕರ್ನಾಟಕ ಸರ್ಕಾರ ಅಭಿವೃದ್ಧಿಪಡಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಆ ಗ್ರಾಮಗಳಲ್ಲಿ ನೆಲೆಸಿರುವ ಕೆಲವು ಕನ್ನಡಿಗರಿಗೆ ಮಹಾರಾಷ್ಟ್ರ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದು, ಅವರಿಂದ ಪೂರ್ವಾನುಮತಿ ಪಡೆಯದೆ ಕರ್ನಾಟಕದೊಂದಿಗೆ ವಿಲೀನಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರೆ ಅಥವಾ ಘೋಷಣೆಗಳನ್ನು ಕೂಗಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡದ ಹಿರಿಯ ಮುಖಂಡ ಅಶೋಕ ಚಂದರಗಿ ಮಾತನಾಡಿ, ಗಡಿಭಾಗದಲ್ಲಿ ಮಹಾರಾಷ್ಟ್ರದಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ಸಮಸ್ಯೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲು ಬಯಸಿದ್ದಾರೆ. ಮಹಾರಾಷ್ಟ್ರದ ಗಡಿಯಲ್ಲಿ ಸುಮಾರು 60 ಹಳ್ಳಿಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುತ್ತಿವೆ. ಮುಖ್ಯಮಂತ್ರಿಗಳ ಭೇಟಿಗೆ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಶೀಘ್ರವೇ ಬೆಳಗಾವಿ ಡಿಸಿ, ಎಸ್ಪಿ ಹಾಗೂ ನಗರ ಪೊಲೀಸ್ ಆಯುಕ್ತರಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ, ಮಹಾರಾಷ್ಟ್ರದ ಜಟ್ ಪ್ರದೇಶದ 42 ಗ್ರಾಮಗಳು ಕರ್ನಾಟಕದೊಂದಿಗೆ ವಿಲೀನಗೊಳ್ಳಲು ಬಯಸುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT