ಮಹದೇವಪುರ ವಿಧಾನಸಭಾ ಕ್ಷೇತ್ರದ ವಿಶೇಷ ಅಧಿಕಾರಿ ಅಜಯ್ ನಾಗಭೂಷಣ್ ಬುಧವಾರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ನಡೆಸಿದರು. 
ರಾಜ್ಯ

ಮತದಾರರ ಮಾಹಿತಿ ಕಳವು ಪ್ರಕರಣ: ವಿಶೇಷ ಅಧಿಕಾರಿಯಿಂದ ಸರ್ವಪಕ್ಷ ಸಭೆ, ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ

ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಲು ನಿಯೋಜನೆಗೊಂಡಿರುವ ವಿಶೇಷಾಧಿಕಾರಿ ಅಜಯ್ ನಾಗಭೂಷಣ್ ಅವರು, ಬುಧವಾರ ಸರ್ವಪಕ್ಷ ಸಭೆ ನಡೆಸಿದ್ದು, ಈ ವೇಳೆ ಪರಿಷ್ಕೃತ ಮತದಾರರ ಪಟ್ಟಿಗೆ ಆಕ್ಷೇಪಣೆ ಆಹ್ವಾನ ನೀಡಿದ್ದಾರೆ.

ಸಭೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡ ನಲ್ಲೂರಹಳ್ಳಿ ನಾಗೇಶ್ ಅವರು, ಬೂತ್ ನಂ. 283, 284, 285 ಮತ್ತು 286 ಮತ್ತು ಪ್ರತಿ ಬೂತ್‌ನಿಂದ ಅಳಿಸಲಾದ ಸುಮಾರು 30 ಹೆಸರುಗಳು ಇನ್ನೂ ಪ್ರಸ್ತುತವಾಗಿವೆ ಎಂದು ಹೇಳಿದರು.

ಮತದಾರರ ಜಾಗೃತಿ ಕಾರ್ಯಕ್ರಮಕ್ಕಾಗಿ ಬಿಜೆಪಿ ನಾಯಕರು ಹಾಗೂ ಬಿಬಿಎಂಪಿ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಹಾಗೂ ಬಿಬಿಎಂಪಿಯೇ ಈ ಅಕ್ರಮಗಳಿಗೆ ಕಾರಣವಾಗಿದೆ ಎಂದು ಆರೋಪಿಸಿದರು.

ಒಂದು ಬೂತ್‌ನಲ್ಲಿ ಇಷ್ಟು ಮಟ್ಟದಲ್ಲಿ ಹೆಸರುಗಳನ್ನು ಅಳಿಸಿರುವುದಾದರೆ, ಇಲ್ಲಿರುವ ಎಲ್ಲಾ ಬೂತ್‌ಗಳಿಂದ ಎಷ್ಟು ಹೆಸರುಗಳು ಕಾಣೆಯಾಗಿವೆ ಎಂಬುದನ್ನು ಊಹಿಸಿ. ಈ ಹಿಂದೆಯೂ ಈ ಬೆಳವಣಿಗೆಗಳಾಗಿದ್ದವು ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದವರು, ಒಬಿಸಿಗಳು ಪ್ರಮುಖವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯೇತರ ಪಕ್ಷಗಳ ಬೆಂಬಲಿಗರ ಹೆಸರುಗಳನ್ನು ಅಳಿಸಲಾಗಿದೆ ಎಂದು ಅವರು ಹೇಳಿದರು

ಅಮಾನತುಗೊಂಡಿರುವ ಕಂದಾಯ ಅಧಿಕಾರಿ ಚಂದ್ರಶೇಖರ್ ಒಬ್ಬರೇ ಅಲ್ಲ ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಇನ್ನೂ ಹಲವು ಹಿರಿಯ ಅಧಿಕಾರಿಗಳು ಮತ್ತು ಬಿಜೆಪಿ ಮುಖಂಡರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿದರು.

ಸಭೆಯಲ್ಲಿ ಮಹದೇವಪುರ ಕ್ಷೇತ್ರದಲ್ಲಿ 479 ಮತಗಟ್ಟೆಗಳಿದ್ದು, ಬಹುತೇಕ ಎಲ್ಲ ಬೂತ್‌ಗಳಲ್ಲಿ ಹೆಸರು ಅಳಿಸಿ ಹಾಕಲಾಗಿದೆ ಎಂದು ಕಾಂಗ್ರೆಸ್, ಜೆಡಿಎಸ್ ಮತ್ತು ಇತರ ರಾಜಕೀಯ ಪಕ್ಷಗಳ ಮುಖಂಡರು ಒಕ್ಕೊರಲಿನಿಂದ ಹೇಳಿದರು.

ಈ ವೇಳೆ ಮಾತನಾಡಿದ ಅಧಿಕಾರಿಗಳು, ಎಲ್ಲಾ ಬೂತ್ ಗಳಲ್ಲಿಯೂ ಪಟ್ಟಿಯನ್ನು ಮರಪರಿಶೀಲಿಸಿ 8 ದಿನಗಳಲ್ಲಿ ವರದಿ ನೀಡುವುದಾಗಿ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT