ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಗಳ ನವೀಕರಿಸಲು ಅಧಿಕಾರಿಗಳು ಮುಂದು!

ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ವ್ಯವಸ್ಥೆಗಳನ್ನು ನವೀಕರಿಸಲು ಮುಂದಾಗಿದೆ.

ಬೆಂಗಳೂರು: ರಾಜ್ಯ ಉನ್ನತ ಶಿಕ್ಷಣ ಇಲಾಖೆಯು ತನ್ನ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಹಲವಾರು ವ್ಯವಸ್ಥೆಗಳನ್ನು ನವೀಕರಿಸಲು ಮುಂದಾಗಿದೆ.

ಈ ಸಂಬಂಧ ಉನ್ನತ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರು ಮಾತನಾಡಿ, ನಾಲ್ಕು ಹಂತದ ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಇದನ್ನು ಹೊಂದಿರುತ್ತದೆ. ಇದು ನಿವೃತ್ತಿಯಾಗುವ ಸಿಬ್ಬಂದಿ ಮತ್ತು ಅಧ್ಯಾಪಕರ ಪಿಂಚಣಿ ಸಂಬಂಧಿತ ಪ್ರಕರಣಗಳ ಪರಿಷ್ಕರಿಸುವುದನ್ನು ಹೊಂದಿರುತ್ತದೆ.

“ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ದ್ವಂದ್ವವನ್ನು ಹೋಗಲಾಡಿಸುವುದು ಇದರ ಗುರಿಯಾಗಿದೆ. ಮಾಹಿತಿಯನ್ನು ನಮೂದಿಸಲು ಮಧ್ಯಸ್ಥಗಾರರಿಗೆ ಪ್ರವೇಶದ ಒಂದು ಅವಕಾಶ ಇರಬೇಕು, ಇದರಿಂದ ಅದು ಇಲಾಖೆ, ಅಧಿಕಾರಿಗಳು, ವಿಶ್ವವಿದ್ಯಾಲಯ ಮತ್ತು ಕಾಲೇಜಿಗೆ ಲಭ್ಯವಿರುತ್ತದೆ.

ಡಿಜಿಟಲ್ ಕಲಿಕೆ ಮತ್ತು ಏಕೀಕೃತ ಡೇಟಾ ಎರಡು ಅತ್ಯುತ್ತಮ ಅಭ್ಯಾಸಗಳಾಗಿವೆ. ಆದ್ದರಿಂದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇವುಗಳು ಅನುಸರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ ಎನ್ ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

ಏತನ್ಮಧ್ಯೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ (ಡಿಸಿಟಿಇ) ಆಯುಕ್ತ ಪ್ರದೀಪ್ ಪಿ ಮಾತನಾಡಿ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಇಂಗ್ಲಿಷ್ ಮತ್ತು ಕನ್ನಡ ಎರಡರಲ್ಲೂ ಸಂವಹನ ನಡೆಸುವಂತೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮ ಪರೀಕ್ಷೆಗಳನ್ನು ಇಂಗ್ಲಿಷ್ ಅಥವಾ ಕನ್ನಡದಲ್ಲಿ ಬರೆಯಲು ಅವಕಾಶ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ