ದೇವೇಗೌಡ 
ರಾಜ್ಯ

ರಾಜ್ಯಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಧ್ವನಿ ಎತ್ತಿದ ಮಾಜಿ ಪ್ರಧಾನಿ ದೇವೇಗೌಡ!

ಮೇಕೆದಾಟು ಯೋಜನೆಯಿಂದ ಹಳೇ ಮೈಸೂರು ಭಾಗಕ್ಕೆ ಕುಡಿಯಲು ನೀರು ಸಿಗಲಿದೆ. ಇನ್ನು ನಮ್ಮ ಭಾಗದಲ್ಲಿ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಹೊರತು ಬೇರೆ ರಾಜ್ಯದ ಗಡಿಯಲ್ಲ ಅಲ್ಲ.

ನವದೆಹಲಿ: ಮೇಕೆದಾಟು ಯೋಜನೆಯಿಂದ ಹಳೇ ಮೈಸೂರು ಭಾಗಕ್ಕೆ ಕುಡಿಯಲು ನೀರು ಸಿಗಲಿದೆ. ಇನ್ನು ನಮ್ಮ ಭಾಗದಲ್ಲಿ ಯೋಜನೆಯನ್ನು ಜಾರಿ ಮಾಡಲಾಗುತ್ತಿದೆ ಹೊರತು ಬೇರೆ ರಾಜ್ಯದ ಗಡಿಯಲ್ಲ ಅಲ್ಲ. ಹೀಗಾಗಿ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆ ವಿವಾದವನ್ನು ಬಗೆಹರಿಸಬೇಕು ಎಂದು ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಗ್ರಹಿಸಿದ್ದಾರೆ.

ಮೇಕೆದಾಟು ವಿಚಾರವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ವಿಷಮ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕದ ವಿವಿಧ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಅಗತ್ಯವಿರುವ ಅನುಮತಿಗಳನ್ನು ನೀಡಬೇಕೆಂದು ದೇವೇಗೌಡರು ಕೇಂದ್ರಕ್ಕೆ ಮನವಿ ಮಾಡಿದರು. 

ಮೇಕೆದಾಟು ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಕರ್ನಾಟಕ ನೀರಿನ ಕೊರತೆಯ ರಾಜ್ಯ. ತುಂಗಭದ್ರಾ ಆಗಲಿ, ಮಹದಾಯಿಯಾಗಲಿ ಕೇಂದ್ರದ ಮುಂದೆ ಎಷ್ಟೋ ಯೋಜನೆಗಳು ಬಾಕಿ ಇವೆ. ಇಂದು ಹಳೇ ಮೈಸೂರು ಭಾಗದ ಒಂಬತ್ತು ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಮೊರೆ ಹೋಗುತ್ತಿದ್ದೇವೆ ಎಂದು ಶೂನ್ಯ ವೇಳೆಯಲ್ಲಿ ದೇವೇಗೌಡರು ಪ್ರಸ್ತಾಪಿಸಿದರು. ಹೀಗಾಗಿ ಕರ್ನಾಟಕದ ಸಮಸ್ಯೆ ಬಗೆಹರಿಯಬೇಕು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT