ನಿಮ್ಹಾನ್ಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಕೆ. ಸುಧಾಕರ್ 
ರಾಜ್ಯ

ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆ ಹೆಚ್ಚಳ: ಡಾ. ಕೆ.ಸುಧಾಕರ್

ಕಳೆದ 10 ವರ್ಷಗಳಿಂದ ಮಾನಸಿಕ, ನರರೋಗಗಳು, ಸ್ಟ್ರೋಕ್‌, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು: ಕಳೆದ 10 ವರ್ಷಗಳಲ್ಲಿ ನರ, ಮಾನಸಿಕ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು  ಕಳವಳಕಾರಿ ಸಂಗತಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ. 

ನಿಮ್ಹಾನ್ಸ್‌ ನಲ್ಲಿ ಮಿದುಳಿನ ಆರೋಗ್ಯ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ವರ್ಷಗಳಲ್ಲಿ ಪಾರ್ಶ್ವವಾಯು, ಮೂರ್ಛೆರೋಗ, ತಲೆನೋವಿನಿಂದ ನರಳುತ್ತಿರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.
ಮಾನಸಿಕ ಆರೋಗ್ಯದಲ್ಲಿನ ಏರುಪೇರು ಮನುಷ್ಯನ ಆರೋಗ್ಯದಲ್ಲಿ ಸಮಸ್ಯೆ ಸೃಷ್ಟಿಸುವ ಜೊತೆಗೆ ಸಮಾಜಕ್ಕೂ ಆತಂಕ ತರುತ್ತಿದೆ. ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಆರೋಗ್ಯವಾಗಿರುತ್ತಾನೆ ಎಂದರು.

ಬೆಂಗಳೂರಿನಲ್ಲಿ ನಿಮ್ಹಾನ್ಸ್‌ನಂತಹ ಸಂಸ್ಥೆ ಇರುವುದು ನಮ್ಮ ರಾಜ್ಯದ ಸೌಭಾಗ್ಯವಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳಿಂದಲೂ ಬ್ರೈನ್‌ಗೆ ಸಂಬಂಧಿಸಿದ ಕಾಯಿಲೆಗಳು ಹೆಚ್ಚಾಗುತ್ತಿದೆ.  ಅಂಕಿ-ಅಂಶಗಳ ಪ್ರಕಾರ ಮಾನಸಿಕ ಅರೋಗ್ಯದಿಂದಲೇ ಸುಮಾರು ಶೇ 7 ರಿಂದ 8 ರಷ್ಟು ಜನರು ಸಾವಿಗೀಡಾಗುತ್ತಿದ್ದು, ಇದು ಸಾವಿಗೆ ಕಾರಣವಾಗಿರುವ ಅಂಶಗಳ ಪೈಕಿ 2ನೇ ಸ್ಥಾನ ಪಡೆದಿದೆ ಎಂದರು. 

ಕೇಂದ್ರ ಸರ್ಕಾರ ಟಿ-ಮನಸ್ ಮೂಲಕ ಮಾನಸಿಕ ರೋಗಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಅಭಿಯಾನವನ್ನು ಮಾಡುತ್ತಿದೆ. ರಾಜ್ಯ ಸರ್ಕಾರ ಹಬ್‌ & ಸ್ಪೋಕ್‌ ಮಾಡೆಲ್‌ ಮೂಲಕ ಈಗಾಗಲೇ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ನಿಮ್ಹಾನ್ಸ್‌ ನೆರವಿನೊಂದಿಗೆ ಪೈಲಟ್‌ ಪ್ರಾಜೆಕ್ಟ್‌ ಮಾಡುತ್ತಿದೆ. ಇದನ್ನು ಮುಂದಿನ ದಿನಗಳಲ್ಲಿ ಈ ಸೇವೆ ರಾಜ್ಯದ ಎಲ್ಲಾ ಕಡೆ ಸಿಗುವಂತೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಪಿಎಚ್‌ ಸಿ ವೈದ್ಯರಿಗೆ ಮಾನಸಿಕ ರೋಗಿಗಳಿಗೆ ಕೌನ್ಸಿಲಿಂಗ್‌ ಹಾಗೂ ಚಿಕಿತ್ಸೆ ನೀಡುವ ಬಗ್ಗೆ ಈಗಾಗಲೇ 3 ತಿಂಗಳ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಎನ್‌ಎಂ, ಸಿಎಚ್‌ಒಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೂ ಈ ಸಂಬಂಧ ತರಬೇತಿ ನೀಡಿ ಮಾನಸಿಕ ರೋಗಿಗಳಿಗೆ ಹೇಗೆ ಚಿಕಿತ್ಸೆ ನೀಡಬೇಕು ಅನ್ನುವ ಬಗ್ಗೆ ತಿಳಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT