ಸಿಎಂ ಬೊಮ್ಮಾಯಿ 
ರಾಜ್ಯ

ಡಿಸೆಂಬರ್ 17ರಂದು ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಗ್ರಾಮ ವಾಸ್ತವ್ಯ ಹೂಡಲು ಸಿಎಂ ಬೊಮ್ಮಾಯಿ ಯೋಜನೆ

ಸಿಎಂ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಡಿಸೆಂಬರ್ 17ರಂದು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ‘ಗ್ರಾಮ ವಾಸ್ತವ್ಯ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಬೆಂಗಳೂರು: ಸಿಎಂ ತವರು ಕ್ಷೇತ್ರವಾದ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದಲ್ಲಿ ಡಿಸೆಂಬರ್ 17ರಂದು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ‘ಗ್ರಾಮ ವಾಸ್ತವ್ಯ’ದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದೇ ಮೊದಲ ಬಾರಿಗೆ ಬೊಮ್ಮಾಯಿ ಅವರು ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗುತ್ತಿದ್ದು, ಈ ಮೂಲಕ ತಮ್ಮ ನಿಕಟಪೂರ್ವ ಸಿಎಂ ಬಿ ಎಸ್ ಯಡಿಯೂರಪ್ಪನವರನ್ನು ಅನುಸರಿಸಲಿದ್ದಾರೆ.  

ಈ ಬಗ್ಗೆ ಮಾತನಾಡಿರುವ ಕಂದಾಯ ಸಚಿವ ಆರ್.ಅಶೋಕ್, ಗ್ರಾಮ ವಾಸ್ತವ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನರಿಗೆ ಉಪಯೋಗವಾಗುತ್ತಿರುವುದರಿಂದ ಜನಪ್ರಿಯವಾಗಿದೆ. ಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳ ಪೂರ್ವಭಾವಿಯಾಗಿ ಅಧಿಕಾರಿಗಳು ಪ್ರತಿ ಮನೆಗೆ ತೆರಳಿ ಅವರ ಸಮಸ್ಯೆಗಳ ಕುರಿತು ಚರ್ಚಿಸುತ್ತಾರೆ. ಡಿಸಿಗಳು, ತಹಶೀಲ್ದಾರ್‌ಗಳು ಮತ್ತು ಎಸ್‌ಪಿಗಳು ಸೇರಿದಂತೆ ಇಂತಹ ವಾಸ್ತವ್ಯದ ಸಮಯದಲ್ಲಿ ಇಡೀ ಸರ್ಕಾರದ ಆಡಳಿತ ಯಂತ್ರವು ಸಿಎಂ ಜೊತೆಗೆ ಇರುವುದರಿಂದ ಜನರ ಸಮಸ್ಯೆಗಳನ್ನು ಬಗೆಹರಿಸುವುದು ಸುಲಭವಾಗುತ್ತದೆ. ಗ್ರಾಮಸ್ಥರ ಬೇಡಿಕೆಗಳು ಕೃತಕ ಅಂಗಗಳಿಂದ ಹಿಡಿದು ದೈಹಿಕವಾಗಿ ಅಶಕ್ತರವರೆಗೆ ಸ್ಮಶಾನಕ್ಕಾಗಿ ಭೂಮಿಯನ್ನು ಹುಡುಕುವವರೆಗೆ ವಯಸ್ಸಾದವರಿಗೆ ಪಿಂಚಣಿವರೆಗೆ ಹೀಗೆ ಸಾಗುತ್ತದೆ ಎಂದರು. 

ಇಂತಹ ಭೇಟಿಗಳಲ್ಲಿ ವಿವಿಧ ಗ್ರಾಮಗಳ ಜನರು ಒಂದೇ ಸ್ಥಳದಲ್ಲಿ ಸೇರುತ್ತಾರೆ. ಅಲ್ಲದೆ, ಅನೇಕ ಮತದಾರರನ್ನು ತಲುಪಬಹುದು. ಶಿಗ್ಗಾವಿ ಅವರ ತವರು ಕ್ಷೇತ್ರವಾಗಿರುವುದರಿಂದ ಇದು ಖಂಡಿತವಾಗಿ ಸಿಎಂಗೆ ನೆರವಾಗಲಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ಗ್ರಾಮ ವಾಸ್ತವ್ಯಕ್ಕೆ ಯೋಜನೆ ರೂಪಿಸಲಾಗುತ್ತಿದೆ. 

ಈ ಬಗ್ಗೆ ಸಿಎಂ ಕಚೇರಿ ಮೂಲಗಳು ಯಾವುದೇ ಮಾಹಿತಿಯನ್ನು ದೃಢಪಡಿಸಿಲ್ಲ, ಸಚಿವ ಅಶೋಕ್ ಅವರು ರಾತ್ರಿ ವಾಸ್ತವ್ಯ ಹೂಡುವ ಸ್ಥಳದಲ್ಲಿಯೇ ಸಿಎಂ ಕೂಡ ವಾಸ್ತವ್ಯ ಹೂಡಬಹುದು. ಅವರು ಆಸಕ್ತಿ ತೋರಿಸಿದ್ದಾರೆ, ಆದರೆ ಇನ್ನೂ ದೃಢೀಕರಿಸಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT