ಸಾಂದರ್ಭಿಕ ಚಿತ್ರ 
ರಾಜ್ಯ

ಮಲೆನಾಡು ಭಾಗದಲ್ಲಿ ಆನೆಗಳ ಹಾವಳಿ: ಸಮಸ್ಯೆ ಕುರಿತು ಚರ್ಚಿಸಲು ಕೇಂದ್ರಕ್ಕೆ ಸಂಸದ ಪ್ರಜ್ವಲ್ ರೇವಣ್ಣ ನೇತೃತ್ವದ ನಿಯೋಗ

ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಆನೆ ಹಾವಳಿ ಕುರಿತು ಚರ್ಚಿಸಲು ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳ ನಿಯೋಗವನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕೊಂಡೊಯ್ಯಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.

ಹಾಸನ: ಹಾಸನ ಸೇರಿದಂತೆ ಮಲೆನಾಡು ಜಿಲ್ಲೆಗಳಲ್ಲಿ ಆನೆ ಹಾವಳಿ ಕುರಿತು ಚರ್ಚಿಸಲು ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳ ನಿಯೋಗವನ್ನು ಶೀಘ್ರದಲ್ಲೇ ಕೇಂದ್ರಕ್ಕೆ ಕೊಂಡೊಯ್ಯಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ. ಸಕಲೇಶಪುರದಲ್ಲಿ ನಿನ್ನೆ ನಡೆದ ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯ ನಂತರ ಈ ತೀರ್ಮಾನ ಕೈಗೊಂಡಿದ್ದಾರೆ. 

ಮಲೆನಾಡು ಭಾಗದಲ್ಲಿ ವಾಸಿಸುತ್ತಿರುವ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕೇಂದ್ರಕ್ಕೆ ಅರಿವಿದೆ. ನಿಯೋಗವು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲಿದೆ ಎಂದರು. 

ಆನೆಗಳನ್ನು ಆವಾಸಸ್ಥಾನಗಳಿಂದ ಹಿಡಿದು ಸ್ಥಳಾಂತರಿಸಲು ಕೇಂದ್ರವು ಅನುಮತಿ ನೀಡುವುದಿಲ್ಲ ಆದರೆ ಅಪಾಯವನ್ನು ಎದುರಿಸಲು ಪರ್ಯಾಯ ಕ್ರಮಗಳನ್ನು ಸೂಚಿಸಬಹುದು ಎಂದು ಹೇಳಿದರು. ಇತ್ತೀಚೆಗೆ ಆಲೂರು ಮತ್ತು ಸಕಲೇಶಪುರ ತಾಲೂಕಿನ ಆನೆ ಪೀಡಿತ ಪ್ರದೇಶಗಳಲ್ಲಿ ವಾಸ್ತವ ಸ್ಥಿತಿಯ ಬಗ್ಗೆ ಅಧ್ಯಯನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳ ತಂಡವನ್ನು ಕಳುಹಿಸಿತ್ತು. ತಂಡವು ಇತ್ತೀಚೆಗೆ ಸಲ್ಲಿಸಿದ ವರದಿಯನ್ನು ಅಧ್ಯಯನ ಮಾಡಿದ ನಂತರ ಸಿಎಂ ಆನೆಗಳ ಹಾವಳಿಯನ್ನು ಎದುರಿಸಲು ಕಾರ್ಯಪಡೆಯನ್ನು ರಚಿಸಿದ್ದಾರೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆ ರಚಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

ಭಾರತಕ್ಕೆ ಕಷ್ಟದ ದಿನಗಳು ಶುರು: 1.4 ಬಿಲಿಯನ್ ಜನರಿದ್ದರೂ ನಮ್ಮಿಂದ ಜೋಳ ಖರೀದಿಸಲ್ಲ; ಮತ್ತೆ ಕೆಂಡಕಾರಿದ ಅಮೆರಿಕ ಸಚಿವ ಲುಟ್ನಿಕ್!

2025 ಮಹಿಳಾ ಹಾಕಿ ಏಷ್ಯಾ ಕಪ್‌: ಚೀನಾ ವಿರುದ್ಧ ಸೋತ ಭಾರತ ಬೆಳ್ಳಿಗೆ ತೃಪ್ತಿ; ಪ್ರಧಾನಿ ಮೋದಿ ಅಭಿನಂದನೆ!

ಹಣಕ್ಕಾಗಿ ರಾಷ್ಟ್ರೀಯತೆ ಬಲಿ: ಭಾರತ-ಪಾಕಿಸ್ತಾನ ಏಷ್ಯಾ ಕಪ್ ಪಂದ್ಯಕ್ಕೆ BJP ವಿರುದ್ಧ ವಿರೋಧ ಪಕ್ಷಗಳ ಆಕ್ರೋಶ!

ಉತ್ತರ ಪ್ರದೇಶ: ಲಾಠಿ ಚಾರ್ಜ್ ನಲ್ಲಿ ಬಿಜೆಪಿ ಕಾರ್ಯಕರ್ತನ ಸಾವು; ತನಿಖೆಗೆ ಎಸ್‌ಐಟಿ

SCROLL FOR NEXT