ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ದಂಪತಿಯಿಂದ ಹಣ ವಸೂಲಿ, ಇಬ್ಬರು ಹೊಯ್ಸಳ ಗಸ್ತು ಪೊಲೀಸ್ ಅಮಾನತು

ರಾತ್ರಿ ವೇಳೆ ಓಡಾಡುತ್ತಿದ್ದ ದಂಪತಿಯಿಂದ ಹಣ ವಸೂಲಿ ಆರೋಪದ ಮೇರೆಗೆ ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯ ಹೊಯ್ಸಳ ವಾಹನದ  ಇಬ್ಬರು ಕಾನ್ ಸ್ಟೆಬಲ್ ಗಳನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಇಲ್ಲಿನ ದಂಪತಿಯಿಂದ ಹಣ ವಸೂಲಿ ಮಾಡಿದ ಆರೋಪದ ಮೇಲೆ ಶುಕ್ರವಾರ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಹೆಡ್ ಕಾನ್‌ಸ್ಟೆಬಲ್ ರಾಜೇಶ್ ಮತ್ತು ಕಾನ್‌ಸ್ಟೆಬಲ್ ನಾಗೇಶ್ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಯಾಗಿದ್ದು, ಇವರು ಗಸ್ತು ತಿರುಗುತ್ತಿದ್ದರು ಎನ್ನಲಾಗಿದೆ.

ದಂಪತಿ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಡಿಸೆಂಬರ್ 8 ರಂದು ಕಾರ್ತಿಕ್ ಮತ್ತು ಅವರ ಪತ್ನಿ 12.30ಕ್ಕೆ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಾನ್ಯತಾ ಟೆಕ್ ಪಾರ್ಕ್ ಆವರಣದಲ್ಲಿರುವ ತಮ್ಮ ನಿವಾಸಕ್ಕೆ ವಾಪಸಾಗುತ್ತಿದ್ದರು. ಆಗ ಆರೋಪಿ ಪೊಲೀಸರು ದಂಪತಿಯನ್ನು ತಡೆದು ರಾತ್ರಿ 11 ಗಂಟೆಯ ನಂತರ ಈ ಪ್ರದೇಶದಲ್ಲಿ ಓಡಾಡಬಾರದು ಎಂದು ಹೇಳಿದ್ದಾರೆ. ಈ ಬಗ್ಗೆ ಪ್ರಶ್ನಿಸಿ ದಂಪತಿಗೆ ಕಿರುಕುಳ ನೀಡಿದ್ದರು.

ಗುರುತಿನ ಚೀಟಿಯನ್ನು ಕೇಳಿದಾಗ, ದಂಪತಿ ತಮ್ಮ ಮೊಬೈಲ್‌ನಲ್ಲಿರುವ ತಮ್ಮ ಆಧಾರ್ ಕಾರ್ಡ್‌ಗಳ ಚಿತ್ರಗಳನ್ನು ತೋರಿಸಿದ್ದಾರೆ. ಈ ವೇಳೆ ಪೊಲೀಸರು ಅವರ ಮೊಬೈಲ್ ಕಸಿದು 3 ಸಾವಿರ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದಾರೆ.

ಹಣ ಪಾವತಿಸಲು ವಿಫಲವಾದರೆ 'ಗಂಭೀರ ಪರಿಣಾಮಗಳನ್ನು' ಎದುರಿಸಬೇಕಾಗುತ್ತದೆ ಎಂದು ಅವರು ದಂಪತಿಗೆ ಬೆದರಿಕೆ ಹಾಕಿದ್ದರು. ಕ್ಯೂಆರ್ ಕೋಡ್ ಬಳಸಿ ದಂಪತಿ 1,000 ರೂಪಾಯಿ ಪಾವತಿ ಮಾಡಿ ಮನೆಗೆ ತಲುಪಿದ್ದರು. ನಂತರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್

Biggboss Kannada ಅಗ್ನಿಪರೀಕ್ಷೆ: ಗೆಟ್ ಔಟ್, ಇದೆಲ್ಲಾ ಬೇಡ ಬ್ರೇ; ವಿನಯ್ ಗೌಡಗೆ ಸ್ಪರ್ಧಿ ತಿರುಗೇಟು, Video ವೈರಲ್!

SIR ಮೊದಲ ಕರಡು ಮತದಾರರ ಪಟ್ಟಿ ಪ್ರಕಟ: 1 ಕೋಟಿ, 7 ಲಕ್ಷ ಮತದಾರರ ಹೆಸರು ಡಿಲೀಟ್, ಬೆಂಗಳೂರಲ್ಲೇ ಅತಿ ಹೆಚ್ಚು!

ಕೊಲಂಬೊ ಟೆಸ್ಟ್‌ನಲ್ಲಿ ಭಾರತದ ಅಬ್ಬರ: 503/9ಕ್ಕೆ ಇನ್ನಿಂಗ್ಸ್ ಡಿಕ್ಲೇರ್, ಲಂಕಾ ಇನ್ನಿಂಗ್ಸ್ ಗೆ ಮಳೆ ಅಡ್ಡಿ