ಯುವತಿಯರು 
ರಾಜ್ಯ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ: ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಕಿರುಕುಳ

ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಂಗಳೂರು: ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಮುಸ್ಲಿಂ ಯುವಕರ ಜೊತೆಯಲ್ಲಿದ್ದ ಹಿಂದೂ ಯುವತಿಯರಿಗೆ ಸಂಘಪರಿವಾರದ ಕಾರ್ಯಕರ್ತರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶನಿವಾರ ರಾತ್ರಿ ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯಲ್ಲಿ ಹಿಂದೂ ಯುವತಿಯರ ಜತೆಯಲ್ಲಿದ್ದ ಇಬ್ಬರು ಮುಸ್ಲಿಂ ಯುವಕರಿಗೆ ಹಿಂದೂ ಪರ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಶನಿವಾರ ರಾತ್ರಿ 11.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಯುವಕ-ಯುವತಿಯರು ಊಟಕ್ಕೆಂದು ಹೊರಗೆ ಹೋಗಿದ್ದರು. ಸಂತ್ರಸ್ತ ಬಾಲಕಿಯರು ಉತ್ತರ ಪ್ರದೇಶ ಮೂಲದವರಾಗಿದ್ದು, ಅವರಲ್ಲಿ ಒಬ್ಬಾಕೆ ಅಪ್ರಾಪ್ತಳಾಗಿದ್ದು ಅವರ ಜೊತೆಯಲ್ಲಿ ಕೆಲ ಮುಸ್ಲಿಂ ಯುವಕರಿದ್ದರು ಎಂದು ಹೇಳಲಾಗಿದೆ.

ಈ ವೇಳೆ ಹಿಂದೂ ಪರ ಕಾರ್ಯಕರ್ತರು ಅವರನ್ನು ಅಡ್ಡಗಟ್ಟಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಕಿರುಕುಳದ ಹೊರತಾಗಿಯೂ ಸಂತ್ರಸ್ತರ ಪೋಷಕರು ದೂರು ನೀಡದಿರಲು ನಿರ್ಧರಿಸಿದ್ದಾರೆ ಮತ್ತು ಯಾವುದೇ ಪ್ರಕರಣವನ್ನು ದಾಖಲಿಸಿಲ್ಲ ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿದ್ದಾರೆ. "ತಮ್ಮ ಮೇಲೆ ಹಲ್ಲೆ ನಡೆಸಿಲ್ಲ.. ಆದರೆ ಆರೋಪಿಗಳು ಪ್ರಶ್ನಿಸಿದ್ದಾರೆ ಎಂದು ಸಂತ್ರಸ್ತರು ಹೇಳುತ್ತಾರೆ ಮತ್ತು ಅವರು ಪ್ರಕರಣವನ್ನು ಮುಂದುವರಿಸದಿರಲು ನಿರ್ಧರಿಸಿದ್ದಾರೆ. ನಾವು ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದೇವೆ" ಎಂದು ಅವರು ಹೇಳಿದರು.

ಈ ನಡುವೆ ಕೆಲ ದಿನಗಳ ಹಿಂದೆ ಚಿನ್ನಾಭರಣ ಅಂಗಡಿಯೊಂದರಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ನಾಲ್ವರು ಹಿಂದೂ ಪರ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಕೆಲವು ಹಿಂದುತ್ವವಾದಿ ಕಾರ್ಯಕರ್ತರು ಸುಲ್ತಾನ್ ಚಿನ್ನದ ಅಂಗಡಿಯೊಳಗೆ ನುಗ್ಗಿದ್ದರು. ಕಂಕನಾಡು ಮೂಲದ ಚೇತನ್ ಕುಮಾರ್ (39), ಕಂಕನಾಡಿಯ ಪ್ರಕಾಶ್ (34), ಜೆಪ್ಪಿನಮೊಗರು ನಿವಾಸಿ ಶಿಬಿನ್ ಪಡಿಕಲ್ (36) ಮತ್ತು ಅತ್ತಾವರ ನಿವಾಸಿ 35 ವರ್ಷದ ಗಣೇಶ್ ಬಂಧಿತರು.

ಚಿನ್ನಾಭರಣ ಮಳಿಗೆಯ ಮಾರಾಟ ವಿಭಾಗದ ಯುವಕ ಮತ್ತು ಯುವತಿಯು ಅನ್ಯೋನ್ಯತೆಯಿಂದಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಗುಂಪು ಡಿ.6ರ ಸಂಜೆ ಯುವತಿಯ ಪೋಷಕರೊಂದಿಗೆ ಚಿನ್ನಾಭರಣದ ಮಳಿಗೆಗೆ ನುಗ್ಗಿ ಪೊಲೀಸರ ಸಮ್ಮುಖವೇ ಹಲ್ಲೆ ನಡೆಸಿತ್ತು ಎಂದು ಆರೋಪಿಸಲಾಗಿತ್ತು. ಈ ಕದ್ರಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT