ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

‘ಸಲಾಂ ಆರತಿ’ ಹೆಸರು ಬದಲಿಸುವ ನಿರ್ಧಾರ ಸರಿಯಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂತಹ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದಿದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.

ಮಂಗಳೂರು: ಯಾವುದೋ ಗುಲಾಮಿ ಪರಿಸ್ಥಿತಿಯಲ್ಲಿ ಸಲಾಂ ಆರತಿ ಪದ್ಧತಿ ಚಾಲ್ತಿಗೆ ಬಂದಿತ್ತು. ಈಗ ಅಂತಹ ಪದ್ಧತಿ ಬದಲಾಗಬೇಕು. ಕನಿಷ್ಠ ನಮ್ಮ ದೇವಾಲಯಗಳಲ್ಲಿ ಸಾಂಸ್ಕೃತಿಕ ನೆಲೆಗಟ್ಟು ಗಟ್ಟಿಗೊಳಿಸದಿದ್ದಲ್ಲಿ ಮತ್ತೆ ಎಲ್ಲಿ ಆಗೋದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಾರೆ.

ಖಾಸಗಿ ಕಾರ್ಯಕ್ರಮ ನಿಮಿತ್ತ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದರು.

‘ಸಲಾಂ ಆರತಿ’ (ಕೆಲವು ದೇವಾಲಯಗಳಲ್ಲಿ ಮೈಸೂರು ರಾಜ ಟಿಪ್ಪು ಸುಲ್ತಾನನ ಹೆಸರಿನಲ್ಲಿ ನಡೆಯುವ ಆಚರಣೆಗಳು) ಹೆಸರು  ಬದಲಿಸುವ ಸರ್ಕಾರದ ನಿರ್ಧಾರ ಸರಿಯಾಗಿದೆ. ನಮ್ಮ ಸಂಸ್ಕೃತಿಯನ್ನು ಬಲಪಡಿಸುವ ಕೆಲಸವನ್ನು ದೇವಸ್ಥಾನಗಳಲ್ಲಿ ಕೈಗೊಳ್ಳದಿದ್ದರೆ ಇನ್ನೆಲ್ಲಿ ಆಗಬೇಕು? ಎಂದು ಪ್ರಶ್ನಿಸಿದರು.

ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು. ಯಾರೂ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಬಾರದು. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಸಹಕಾರ ನೀಡಬೇಕು. ಇತ್ತೀಚಿಗೆ ದ.ಕ.ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲವೂ ಸರಿಯಾಗಿದೆ. ಒಂದೆರಡು ಹತ್ಯೆ ಪ್ರಕರಣಗಳು ಬಿಟ್ಟರೆ ಮತ್ತೆಲ್ಲವೂ ಆ ಮಟ್ಟದಲ್ಲಿ ಯಾವುದೂ ನಡೆದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT