ಸಂಗ್ರಹ ಚಿತ್ರ 
ರಾಜ್ಯ

ದತ್ತಪೀಠದಿಂದ ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಿ: ಗೌಸ್ ಮೊಹಿಯುದ್ದೀನ್ ಆಗ್ರಹ

ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು: ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಲಿಖಿತವಾಗಿ ಮನವಿ ಮಾಡಿದ ನಂತರವೇ ಅವರ ನಿಯೋಜನೆಯನ್ನು ಸ್ವೀಕರಿಸಲಾಗಿತ್ತು. ಆದರೆ, ದತ್ತ ಜಯಂತಿ ಬಳಿಕವೂ ಹಿಂದು ಅರ್ಚಕರು ಪೂಜೆಗಳನ್ನು ಮುಂದುವರೆಸುತ್ತಿದ್ದಾರೆ. ಅವರನ್ನು ಚಿಕ್ಕಮಗಳೂರು ಜಿಲ್ಲಾಡಳಿತ ವಾಪಸ್ ಕಳುಹಿಸಬೇಕೆಂದು ಆಗ್ರಹಿಸಿದ್ದಾರೆ.

ಮುಸ್ಲಿಂ ಮೌಲ್ವಿಗಳನ್ನು ಪಕ್ಕಕ್ಕೆ ಸರಿಸಲಾಗಿತ್ತು, ಇದು ಮುಜಾವವರಿಗೆ ಮಾಡಿದ ಅವಮಾನವಾಗಿದೆ. ಇಂತಹ ಬೆಳವಣಿಗೆಗಳು ದರ್ಗಾ ಆಸ್ತಿಯನ್ನು ಕಬಳಿಸುವ ಯತ್ನವಾಗಲಿದೆ ಎಂದು ಹೇಳಿದ್ದಾರೆ.

ದತ್ತಪೀಠದಲ್ಲ ಪೂಜೆಗಳು ನಡೆಯುತ್ತಿದ್ದ ವೇಳೆ ಜಿಲ್ಲೆಯಿಂದ ಗಡಿಪಾರು ಮಾಡಿದ ಕುಖ್ಯಾತ ರೌಡಿಗಳೂ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಆದರೆ, ಇದನ್ನು ಪ್ರಶ್ನಿಸಿದರೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ತಿಳಿಸಿದರು.

ದತ್ತ ಪೀಠದ ವ್ಯವಸ್ಥಾಪನಾ ಸಮಿತಿಯಲ್ಲಿ 'ಎಂಟು ಸದಸ್ಯರ ಪೈಕಿ ಏಳು ಮಂದಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರೆ, ಒಬ್ಬ ಮುಸ್ಲಿಂ ವ್ಯಕ್ತಿಯಿದ್ದಾರೆ, ಆತನೂ ಬಿಜೆಪಿಯ ಖ್ಯಾತ ಕಾರ್ಯಕರ್ತ ಎಂದಿದ್ದಾರೆ. ಆದರೆ ಸಮಿತಿ ಪಾರದರ್ಶಕವಾಗಿದೆ ಎಂದು ಜಿಲ್ಲಾಡಳಿತ ಸಮರ್ಥನೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

ಮಂಗಳೂರು: ಮೊಬೈಲ್ ಫೋನ್ ವಿಚಾರಕ್ಕೆ ಸಹೋದರರ ನಡುವೆ ಜಗಳ: ಭೀಕರ ಕೊಲೆ!

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸೋಗಿನಲ್ಲಿ ಪ್ರಭಾವ ಬೀರಲು ಯತ್ನ: ಸುಖೇಶ್ ಚಂದ್ರಶೇಖರ್‌ಗೆ 8 ವರ್ಷ ಕಠಿಣ ಜೈಲು ಶಿಕ್ಷೆ

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral