ಸಂಗ್ರಹ ಚಿತ್ರ 
ರಾಜ್ಯ

ದತ್ತಪೀಠದಿಂದ ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಿ: ಗೌಸ್ ಮೊಹಿಯುದ್ದೀನ್ ಆಗ್ರಹ

ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.

ಚಿಕ್ಕಮಗಳೂರು: ಮೂರು ದಿನಗಳ ದತ್ತ ಜಯಂತಿ ಆಚರಣೆಯಲ್ಲಿ ತಾತ್ಕಾಲಿಕವಾಗಿ ನೇಮಕಗೊಂಡಿರುವ ಇಬ್ಬರು ಹಿಂದೂ ಅರ್ಚಕರನ್ನು ವಾಪಸ್ ಕಳುಹಿಸಬೇಕು ಎಂದು ರಾಜ್ಯ ಕೋಮು ಸೌಹಾರ್ದ ವೇದಿಕೆ ಕಾರ್ಯದರ್ಶಿ ಗೌಸ್ ಮೊಹಿಯುದ್ದೀನ್ ಅವರು ಭಾನುವಾರ ಒತ್ತಾಯಿಸಿದ್ದಾರೆ.

ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಲಿಖಿತವಾಗಿ ಮನವಿ ಮಾಡಿದ ನಂತರವೇ ಅವರ ನಿಯೋಜನೆಯನ್ನು ಸ್ವೀಕರಿಸಲಾಗಿತ್ತು. ಆದರೆ, ದತ್ತ ಜಯಂತಿ ಬಳಿಕವೂ ಹಿಂದು ಅರ್ಚಕರು ಪೂಜೆಗಳನ್ನು ಮುಂದುವರೆಸುತ್ತಿದ್ದಾರೆ. ಅವರನ್ನು ಚಿಕ್ಕಮಗಳೂರು ಜಿಲ್ಲಾಡಳಿತ ವಾಪಸ್ ಕಳುಹಿಸಬೇಕೆಂದು ಆಗ್ರಹಿಸಿದ್ದಾರೆ.

ಮುಸ್ಲಿಂ ಮೌಲ್ವಿಗಳನ್ನು ಪಕ್ಕಕ್ಕೆ ಸರಿಸಲಾಗಿತ್ತು, ಇದು ಮುಜಾವವರಿಗೆ ಮಾಡಿದ ಅವಮಾನವಾಗಿದೆ. ಇಂತಹ ಬೆಳವಣಿಗೆಗಳು ದರ್ಗಾ ಆಸ್ತಿಯನ್ನು ಕಬಳಿಸುವ ಯತ್ನವಾಗಲಿದೆ ಎಂದು ಹೇಳಿದ್ದಾರೆ.

ದತ್ತಪೀಠದಲ್ಲ ಪೂಜೆಗಳು ನಡೆಯುತ್ತಿದ್ದ ವೇಳೆ ಜಿಲ್ಲೆಯಿಂದ ಗಡಿಪಾರು ಮಾಡಿದ ಕುಖ್ಯಾತ ರೌಡಿಗಳೂ ಕಾಣಿಸಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಆದರೆ, ಇದನ್ನು ಪ್ರಶ್ನಿಸಿದರೂ ಜಿಲ್ಲಾಡಳಿತದ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ತಿಳಿಸಿದರು.

ದತ್ತ ಪೀಠದ ವ್ಯವಸ್ಥಾಪನಾ ಸಮಿತಿಯಲ್ಲಿ 'ಎಂಟು ಸದಸ್ಯರ ಪೈಕಿ ಏಳು ಮಂದಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದರೆ, ಒಬ್ಬ ಮುಸ್ಲಿಂ ವ್ಯಕ್ತಿಯಿದ್ದಾರೆ, ಆತನೂ ಬಿಜೆಪಿಯ ಖ್ಯಾತ ಕಾರ್ಯಕರ್ತ ಎಂದಿದ್ದಾರೆ. ಆದರೆ ಸಮಿತಿ ಪಾರದರ್ಶಕವಾಗಿದೆ ಎಂದು ಜಿಲ್ಲಾಡಳಿತ ಸಮರ್ಥನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT