ಪ್ರಾತಿನಿಧಿಕ ಚಿತ್ರ 
ರಾಜ್ಯ

ಕಾಡಾನೆ ದಾಳಿ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧಾರ; ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಳ

ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಅಬಕಾರಿ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆನೆ ದಾಳಿಯಿಂದ ಶಾಶ್ವತ ಅಂಗವಿಕಲತೆಗೆ ಒಳಗಾಗುವವರಿಗೆ ಈಗಿರುವ ₹ 5 ಲಕ್ಷದಿಂದ ₹ 10 ಲಕ್ಷ, ಭಾಗಶಃ ಅಂಗವೈಕಲ್ಯಕ್ಕೆ ₹ 2.5 ಲಕ್ಷದಿಂದ ₹ 5 ಲಕ್ಷ, ದಾಳಿಯಿಂದ ಗಾಯಗೊಂಡವರಿಗೆ ₹  30 ಸಾವಿರದಿಂದ ₹ 60 ಸಾವಿರದವರೆಗೆ ಪರಿಹಾರ ನೀಡಲು ಸಭೆ ನಿರ್ಧರಿಸಿತು.

ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪರಿಹಾರವನ್ನು ₹ 10,000 ದಿಂದ ₹ 20,000 ಕ್ಕೆ ಹೆಚ್ಚಿಸಲು ನಿರ್ಧರಿಸಲಾಯಿತು. ಇದೇ ವೇಳೆ ಶಾಶ್ವತ ಅಂಗವಿಕಲತೆಗೆ ಒಳಗಾದವರಿಗೆ ಮಾಸಿಕ ಪಿಂಚಣಿಯನ್ನು ₹ 2,000 ದಿಂದ ₹ 4,000 ಗಳಿಗೆ ಹೆಚ್ಚಿಸಲಾಗಿದೆ. ಬೆಳೆ ಹಾನಿಗೆ ಪಾವತಿಸಿದ ಮೊತ್ತವೂ ದ್ವಿಗುಣಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಕಲೇಶಪುರ-ಬೇಲೂರು ಪ್ರದೇಶದಲ್ಲಿ ಅನಾಹುತ ಸೃಷ್ಟಿಸುತ್ತಿದ್ದ ಎಂಟು ಆನೆಗಳನ್ನು ಸೆರೆಹಿಡಿಯಲು ಮತ್ತು ಸೆರೆಹಿಡಿದ ಆನೆಗಳ ಮೇಲೆ ನಿಗಾ ವಹಿಸಲು ರೇಡಿಯೋ ಕಾಲರ್ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ 23 ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಡಲು ರೇಡಿಯೋ ಕಾಲರ್ ಅಳವಡಿಸಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT