ಪ್ರಾತಿನಿಧಿಕ ಚಿತ್ರ 
ರಾಜ್ಯ

ಕಾಡಾನೆ ದಾಳಿ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧಾರ; ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಳ

ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರವನ್ನು ದ್ವಿಗುಣಗೊಳಿಸಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ನಡೆದ ಸಭೆಯಲ್ಲಿ ಕಾಡಾನೆ ದಾಳಿಯಿಂದ ಸಾವಿಗೀಡಾದವರ ಕುಟುಂಬಕ್ಕೆ ನೀಡುವ ಪರಿಹಾರದ ಮೊತ್ತವನ್ನು ₹ 7.5 ಲಕ್ಷದಿಂದ ₹ 15 ಲಕ್ಷಕ್ಕೆ ಹೆಚ್ಚಿಸಲು ನಿರ್ಧರಿಸಲಾಯಿತು.

ಸಭೆಯಲ್ಲಿ ಅಬಕಾರಿ ಮತ್ತು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆನೆ ದಾಳಿಯಿಂದ ಶಾಶ್ವತ ಅಂಗವಿಕಲತೆಗೆ ಒಳಗಾಗುವವರಿಗೆ ಈಗಿರುವ ₹ 5 ಲಕ್ಷದಿಂದ ₹ 10 ಲಕ್ಷ, ಭಾಗಶಃ ಅಂಗವೈಕಲ್ಯಕ್ಕೆ ₹ 2.5 ಲಕ್ಷದಿಂದ ₹ 5 ಲಕ್ಷ, ದಾಳಿಯಿಂದ ಗಾಯಗೊಂಡವರಿಗೆ ₹  30 ಸಾವಿರದಿಂದ ₹ 60 ಸಾವಿರದವರೆಗೆ ಪರಿಹಾರ ನೀಡಲು ಸಭೆ ನಿರ್ಧರಿಸಿತು.

ಆಸ್ತಿ ಹಾನಿಗೆ ಸಂಬಂಧಿಸಿದಂತೆ ಪರಿಹಾರವನ್ನು ₹ 10,000 ದಿಂದ ₹ 20,000 ಕ್ಕೆ ಹೆಚ್ಚಿಸಲು ನಿರ್ಧರಿಸಲಾಯಿತು. ಇದೇ ವೇಳೆ ಶಾಶ್ವತ ಅಂಗವಿಕಲತೆಗೆ ಒಳಗಾದವರಿಗೆ ಮಾಸಿಕ ಪಿಂಚಣಿಯನ್ನು ₹ 2,000 ದಿಂದ ₹ 4,000 ಗಳಿಗೆ ಹೆಚ್ಚಿಸಲಾಗಿದೆ. ಬೆಳೆ ಹಾನಿಗೆ ಪಾವತಿಸಿದ ಮೊತ್ತವೂ ದ್ವಿಗುಣಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

ಸಕಲೇಶಪುರ-ಬೇಲೂರು ಪ್ರದೇಶದಲ್ಲಿ ಅನಾಹುತ ಸೃಷ್ಟಿಸುತ್ತಿದ್ದ ಎಂಟು ಆನೆಗಳನ್ನು ಸೆರೆಹಿಡಿಯಲು ಮತ್ತು ಸೆರೆಹಿಡಿದ ಆನೆಗಳ ಮೇಲೆ ನಿಗಾ ವಹಿಸಲು ರೇಡಿಯೋ ಕಾಲರ್ ಮಾಡಲು ಅನುಮತಿ ನೀಡಲಾಗಿದೆ. ಈಗಾಗಲೇ 23 ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಡಲು ರೇಡಿಯೋ ಕಾಲರ್ ಅಳವಡಿಸಲಾಗಿದೆ ಎಂದು ಅದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT