ATM ಯಂತ್ರವನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು 
ರಾಜ್ಯ

ಬೆಂಗಳೂರಿನಲ್ಲಿ ATM ಯಂತ್ರವನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು, ಸಿಸಿಟಿವಿ ವಿಡಿಯೋ ವೈರಲ್!

ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ATM ಯಂತ್ರವನ್ನೇ ಕದ್ದೊಯ್ದಿದ್ದು, ಈ ಕಳ್ಳತನದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರಿನ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಳೂರು ರಸ್ತೆಯಲ್ಲಿ ಬ್ಯಾಂಕ್ ಆಫ್ ಬರೋಡ ಶಾಖೆಗೆ ಸೇರಿದ ಎಟಿಎಂ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಡಿ. 10ರಂದು ರಾತ್ರಿ ಕಳ್ಳರು ವಾಹನದಲ್ಲಿ ಬಂದು ಎಟಿಎಂ ಮಿಷನ್‍ಗೆ ಅಳವಡಿಸಿದ್ದ ವೈರ್‍ಗಳನ್ನು ಕತ್ತರಿಸಿ ಎಟಿಎಂ ಯಂತ್ರವನ್ನೇ ಎತ್ತಿಕೊಂಡು ಪರಾರಿಯಾಗಿದ್ದಾರೆ.

ಮೂಲಗಳ ಪ್ರಕಾರ ಚಾಲಾಕಿ ಕಳ್ಳರು ಗೂಡ್ಸ್ ವಾಹನದಲ್ಲಿ ಬಂದು 3.16 ಲಕ್ಷ ರೂ. ಹಣವಿದ್ದ ಎಟಿಎಂ ಯಂತ್ರವನ್ನೇ ಕದ್ದೊಯ್ದಿದ್ದಾರೆ. ಎಟಿಎಂ ಕೇಂದ್ರದಲ್ಲಿ ಸೆಕ್ಯುರಿಟಿ ಗಾರ್ಡ್ ನಿಯೋಜಿಸಲಾಗಿತ್ತು. ಅವರು ಎಟಿಎಂ ಕೇಂದ್ರ ಕಟ್ಟಡದ ಸೆಲ್ಲಾರ್‍ನಲ್ಲಿ ಮಲಗಿದ್ದ ಕಾರಣ ಮಿಷನ್ ಕಳ್ಳತನವಾಗಿರುವುದು ಅವರ ಗಮನಕ್ಕೆ ಬಂದಿಲ್ಲ. ಮುಂಜಾನೆ ಎದ್ದು ನೋಡಿದಾಗ ಎಟಿಎಂ ಮಿಷನ್ ನಾಪತ್ತೆಯಾಗಿರುವುದನ್ನು ಕಂಡು ಗಾಬರಿಯಾಗಿ ಬರೋಡ ಬ್ಯಾಂಕಿನ ಮ್ಯಾನೇಜರ್‍ಗೆ ವಿಷಯ ತಿಳಿಸಿದ್ದಾರೆ. ಮ್ಯಾನೇಜರ್ ಅವರು ಸ್ಥಳಕ್ಕಾಗಮಿಸಿ ನೋಡಿ ನಂತರ ಬೆಳ್ಳಂದೂರು ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.

ಎರಡು ತಂಡ ರಚನೆ:
ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಬೆಳ್ಳಂದೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಣದ ಸಮೇತ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿಕೊಂಡು ಹೋಗಿರುವ ಕಳ್ಳರ ಪತ್ತೆಗಾಗಿ ಎರಡು ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ವೈಟ್‍ಫೀಲ್ಡ್ ವಿಭಾಗದ ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ. ಆರೋಪಿಗಳ ಸುಳಿವಿದ್ದು, ಆದಷ್ಟು ಬೇಗ ಎಟಿಎಂ ಮಿಷನ್ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!