ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಮಹದಾಯಿ ವಿವಾದ ಉಂಟಾಗಲು ಕಾಂಗ್ರೆಸ್‌ ಪಕ್ಷವೇ ಕಾರಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದು ಹೇಳಿದ್ದಾರೆ.

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮಹದಾಯಿ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದು ಹೇಳಿದ್ದಾರೆ.

ಈ ವಿಚಾರವನ್ನು ಜನರು ಮರೆತಿದ್ದಾರೆ ಎಂದು ಕಾಂಗ್ರೆಸ್ ಭಾವಿಸುತ್ತದೆ. ಆದರೆ, ಅವರಿಗೆ ಆ ಪಕ್ಷದ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದಿದ್ದಾರೆ.

ಮಹದಾಯಿ, ಕೃಷ್ಣಾ ಮತ್ತು ಎಸ್‌ಸಿ/ಎಸ್‌ಟಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಎರಡು ಸಮಾವೇಶಗಳನ್ನು ಘೋಷಿಸಿದೆ. ಆದರೆ, ಮಹದಾಯಿ ಯೋಜನೆ ವಿವಾದವಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದರು.

ಗೋವಾದಲ್ಲಿ ಚುನಾವಣಾ ಪ್ರಚಾರದ ವೇಳೆ ಪಕ್ಷದ ವರಿಷ್ಠೆ ಸೋನಿಯಾ ಗಾಂಧಿ ಅವರು ಒಂದು ಹನಿ ನೀರನ್ನು ಎಲ್ಲಿಗೂ ತಿರುಗಿಸುವುದಿಲ್ಲ ಎಂದು ಘೋಷಿಸಿದರು. 2013 ರಿಂದ 2018 ರವರೆಗೆ ಅಧಿಕಾರದಲ್ಲಿದ್ದೂ, ಏನನ್ನೂ ಮಾಡಲು ವಿಫಲರಾದ ಅವರಿಗೆ ಈ ರೀತಿಯಲ್ಲಿ ಹೇಳಲು ಯಾವ ಹಕ್ಕಿದೆ. 40 ವರ್ಷಗಳ ಕಾಲ ಕಾಂಗ್ರೆಸ್‌ ಪಕ್ಷ ಎಸ್‌ಸಿ/ಎಸ್‌ಟಿಯನ್ನು ನೋಡಿ ತಲೆಕೆಡಿಸಿಕೊಂಡಿಲ್ಲವೇ ಎಂದು ಸಿಎಂ ಬೊಮ್ಮಾಯಿ ಪ್ರಶ್ನಿಸಿದರು.

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ನೀಡುವುದಾಗಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ, ಅವರು ಮುಖ್ಯಮಂತ್ರಿಯಾಗಿದ್ದಾಗ ವರದಿ ಮಂಡಿಸುವ ಸಮಾವೇಶದ ವೇಳೆ ಸಿದ್ದರಾಮಯ್ಯ ಅವರು ಕೇವಲ ದೀಪ ಬೆಳಗಿಸಿದರು. ಆದರೆ, ಒಂದೇ ಒಂದು ಮಾತನಾಡಲಿಲ್ಲ ಎಂದು ದೂರಿದ್ದಾರೆ.

'ಅವರ ಎಲ್ಲಾ ಕಾರ್ಯಗಳು ಜನರ ಮನಸ್ಸಿನಲ್ಲಿವೆ. ಅದನ್ನು ಮುಚ್ಚಿ ಹಾಕಲು ಸಮಾವೇಶ ನಡೆಸಲಾಯಿತು. ಅವರು ಜನರನ್ನು ಮತ್ತೆ ಮತ್ತೆ ಮರುಳು ಮಾಡಲು ಸಾಧ್ಯವಿಲ್ಲ. ಹಿಂದಿನ ವಿಧಾನಸಭೆ ಚುನಾವಣೆ ವೇಳೆ ಒಳಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ನಾಯಕರು ಭರವಸೆ ನೀಡಿದ್ದರು. ಆದರೆ, ಅದನ್ನು ಜಾರಿಗೊಳಿಸುವಂತೆ ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರಾ?' ಎಂದು ಬೊಮ್ಮಾಯಿ ಪ್ರಶ್ನಿಸಿದರು.

ಎಸ್‌ಸಿ/ಎಸ್‌ಟಿ ಕೋಟಾದಲ್ಲಿ ಯಾವುದೇ ಗೊಂದಲವಿಲ್ಲ ಎಂದ ಸಿಎಂ, ಪ್ರಸ್ತಾವನೆಯನ್ನು ಬುಧವಾರ ರವಾನಿಸಲಾಗುವುದು ಎಂದು ಹೇಳಿದರು.

ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಹರಿಯುವ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಮಹದಾಯಿ ವಿವಾದವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT