ಸಂಗ್ರಹ ಚಿತ್ರ 
ರಾಜ್ಯ

ಮಾಂಡೌಸ್ ಎಫೆಕ್ಟ್: ನಗರದ ಮಾರುಕಟ್ಟೆಗಳಲ್ಲಿ ವ್ಯಾಪಾರ ಶೇ.80ರಷ್ಟು ಕುಸಿತ

ಮಾಂಡೌಸ್ ಚಂಡಮಾರುತವು ಬೆಂಗಳೂರಿನಲ್ಲಿ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ನಿರಂತರ ಮಳೆ ಮತ್ತು ಶೀತ ಹವಾಮಾನದಿಂದಾಗಿ ಕಳೆದ ನಾಲ್ಕು ದಿನಗಳಿಂದ ನಗರದ ಮಾರುಕಟ್ಟೆಗಳಲ್ಲಿನ ವ್ಯಾಪಾರವು ಶೇ.80 ರಷ್ಟು ಕುಸಿತ ಕಂಡಿದೆ.

ಬೆಂಗಳೂರು: ಮಾಂಡೌಸ್ ಚಂಡಮಾರುತವು ಬೆಂಗಳೂರಿನಲ್ಲಿ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿದೆ. ನಿರಂತರ ಮಳೆ ಮತ್ತು ಶೀತ ಹವಾಮಾನದಿಂದಾಗಿ ಕಳೆದ ನಾಲ್ಕು ದಿನಗಳಿಂದ ನಗರದ ಮಾರುಕಟ್ಟೆಗಳಲ್ಲಿನ ವ್ಯಾಪಾರವು ಶೇ.80 ರಷ್ಟು ಕುಸಿತ ಕಂಡಿದೆ.

ಸಾಮಾನ್ಯವಾಗಿ, ಡಿಸೆಂಬರ್‌ನಲ್ಲಿ ವ್ಯಾಪಾರಿಗಳು ಉತ್ತಮ ವ್ಯಾಪಾರ ಮಾಡುತ್ತಿದ್ದರು. ಈ ತಿಂಗಳಿನಲ್ಲಿ ಕ್ರಿಸ್‌ಮಸ್‌ ಇರುವ ಹಿನ್ನೆಲೆಯಲ್ಲಿ ಜನರು ಉಡುಗೊರೆ ವಸ್ತುಗಳನ್ನು ಖರೀದಿಸುತ್ತಿದ್ದರು. ಆದರೆ ಚಂಡಮಾರುತದ ಪರಿಣಾಮ ಖರೀದಿಯಲ್ಲಿ ಕುಸಿತ ಕಂಡುಬಂದಿದೆ.

ಕೃಷ್ಣರಾಜೇಂದ್ರ ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ಜಿ.ಎನ್.ದಿವಾಕರ್ ಮಾತನಾಡಿ, ‘ಮಾರುಕಟ್ಟೆಯ ಹಲವು ಅಂಗಡಿಗಳಲ್ಲಿ ವ್ಯಾಪಾರ ಬಹುತೇಕ ಶೂನ್ಯವಾಗಿದೆ. ಮಾರುಕಟ್ಟೆಯಲ್ಲಿ 25ಕ್ಕೂ ಹೆಚ್ಚು ವಿವಿಧ ರೀತಿಯ ವ್ಯಾಪಾರವನ್ನು ನಡೆಸಲಾಗುತ್ತಿದೆ, 2,100 ಮಳಿಗೆಗಳಿಗಳಿದ್ದು, 25,000 ವ್ಯಾಪಾರಿಗಳಿದ್ದಾರೆ. ಆದರೆ, ಮಳೆಯ ಪರಿಣಾಮ ಶುಕ್ರವಾರದಿಂದ ವ್ಯಾಪಾರಕ್ಕೆ ಭಾರೀ ಹೊಡೆತ ಬಿದ್ದಿದೆ. ವ್ಯಾಪಾರದಲ್ಲಿ ಶೇ.80ರಷ್ಟು ಕುಸಿತ ಕಂಡು ಬಂದಿದೆ ಎಂದು ಹೇಳಿದ್ದಾರೆ.

ರಸೆಲ್ ಮಾರ್ಕೆಟ್‌ನಲ್ಲಿ 471 ಮಳಿಗೆಗಳು ಮತ್ತು ಶಿವಾಜಿನಗರದ ಇತರ ಏಳು ಮಾರುಕಟ್ಟೆಗಳಲ್ಲಿ ವ್ಯಾಪಾರಿಗಳು ತೀವ್ರ ಸಮಸ್ಯೆ ಅನುಭವಿಸಿದ್ದಾರೆ ಎಂದು ಮಹಮ್ಮದ್ ಇದ್ರೀರ್ ಚೌದ್ರಿ ಹೇಳಿದರು.

ಈ ಪ್ರದೇಶಗಳಲ್ಲಿ, ಅನೇಕ ಬೀದಿ ವ್ಯಾಪಾರಿಗಳಿದ್ದಾರೆ, ಅಲ್ಲಿ ಅವರು ಮೀನು ಮತ್ತು ಇತರ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಆದರೆ ಮಳೆಯಿಂದಾಗಿ ವ್ಯಾಪಾರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮಳೆ ಸುರಿದಾಗ ಜನರು ನಿಂತುಕೊಳ್ಳಲು ಬಿಬಿಎಂಪಿ ಆಶ್ರಯ ತಾಣವನ್ನು ನಿರ್ಮಿಸಬೇಕು. ಇದರಿಂದ ಮಳೆ ನಿಲ್ಲುವವರೆಗೂ ಜನರು ಅಲ್ಲಿ ನಿಂತು ನಂತರ ಖರೀದಿ ಮಾಡಲು ಇದು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಮಡಿವಾಳ ತರಕಾರಿ ಮಾರುಕಟ್ಟೆಯಲ್ಲಿ ಹೊಸಕೋಟೆ, ಆನೇಕಲ್, ಹೊಸೂರು, ಮಾಲೂರು, ಚನ್ನಸಂದ್ರ, ಕೋಲಾರ, ಕನಕಪುರ ಭಾಗದ ರೈತರು ಮಳೆಯಿಂದಾಗಿ ಇಲ್ಲಿಗೆ ತಮ್ಮ ಉತ್ಪನ್ನಗಳನ್ನು ತರಲು ಸಾಧ್ಯವಾಗುತ್ತಿಲ್ಲ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ.

“ಸರಬರಾಜು ಕಡಿಮೆಯಾಗಿದೆ ಮತ್ತು ಕಳೆದ ನಾಲ್ಕು ದಿನಗಳಿಂದ ಗ್ರಾಹಕರಿಲ್ಲ. ಮಾರುಕಟ್ಟೆಯಲ್ಲಿ ಸುಮಾರು 300 ವರ್ತಕರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಮಡಿವಾಳ ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷ ಎ ಪ್ಯಾರೇಜನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT