ಮುರುಘಾಮಠ 
ರಾಜ್ಯ

ಕೊನೆಗೂ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ

ಕೊನೆಗೂ ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ.  ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಮಂಗಳವಾರ ಆದೇಶ...

ಚಿತ್ರದುರ್ಗ: ಕೊನೆಗೂ ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ.  ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.

ಪಿಎಸ್ ವಸ್ತ್ರದ್ ಅವರನ್ನು ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಅವರು  ಇಂದು ಆದೇಶ ಹೊರಡಿಸಿದ್ದಾರೆ.

ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದೆ. ವಸ್ತ್ರದ್ ಅವರು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ದೇಶದ ಮೇಲೆ ಯುದ್ಧದ ಪರಿಣಾಮ ತಗ್ಗಿಸಲು ಕೇಂದ್ರ ಸಜ್ಜು; ಪ್ರಧಾನಿ ಮೋದಿ ಮಹತ್ವದ ಸಭೆ, LPG-LNG ಲಭ್ಯತೆ ಖಚಿತಪಡಿಸಲು ಖಡಕ್ ಸೂಚನೆ

ಹೊಸ ವಿತ್ತೀಯ ವರ್ಷದಲ್ಲಿ ಆಗಿರುವ ಬದಲಾವಣೆಗಳೇನು ಗೊತ್ತಾ? (ಹಣಕ್ಲಾಸು)

'13 ರೂ. ಮೌಲ್ಯದ ಚೀಲಗಳನ್ನು 52 ರೂ.ಗೆ ಖರೀದಿ’: IAS ಅಧಿಕಾರಿ ರೋಹಿಣಿ ಸಿಂಧೂರಿಗೆ ಹೈಕೋರ್ಟ್ ಶಾಕ್, ತನಿಖೆಗೆ ಅನುಮತಿ

SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್: ಸರ್ಕಾರದ ನಿರ್ಧಾರ ವಿರುದ್ಧ ಹೈಕೋರ್ಟ್ ಗೆ ಅರ್ಜಿ

ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಬೆಂಗಳೂರು: ಧರ್ಮರಾಯಸ್ವಾಮಿ ದೇವಸ್ಥಾನದಿಂದ ವೈಭವದ ಕರಗ ಆರಂಭ, ಲಕ್ಷಾಂತರ ಭಕ್ತರು ಸಾಕ್ಷಿ

SCROLL FOR NEXT