ಮೂಡುಬಿದರಿಗೆ 2 ಲಕ್ಷ ಜೋಳದ ರೊಟ್ಟಿ ಕಳುಹಿಸಲು ಸಿದ್ಧತೆ ನಡೆಸುತ್ತಿರುವ ಗದಗದ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು. 
ರಾಜ್ಯ

ಮೂಡುಬಿದರಿಯಲ್ಲಿ ಜಾಂಬೂರಿಗೆ ಭರ್ಜರಿ ಸಿದ್ಧತೆ: 2 ಲಕ್ಷ ರೊಟ್ಟಿ ಪೂರೈಸಲು ಸ್ಕೌಟ್ಸ್ ಮತ್ತು ಗೈಡ್ಸ್ ಮುಂದು!

ಡಿ.21ರಿಂದ 27ರವರೆಗೆ ಮೂಡುಬಿದರಿಯ ಆಳ್ವಾಸ್ ಕಾಲೇಜು ಆವರಣದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ –ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗದಗದ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ವಿನೂತನ ಪ್ರಯತ್ನವೊಂದಕ್ಕೆ ಮುಂದಾಗಿದ್ದಾರೆ.

ಗದಗ: ಡಿ.21ರಿಂದ 27ರವರೆಗೆ ಮೂಡುಬಿದರಿಯ ಆಳ್ವಾಸ್ ಕಾಲೇಜು ಆವರಣದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ –ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಗದಗದ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ವಿನೂತನ ಪ್ರಯತ್ನವೊಂದಕ್ಕೆ ಮುಂದಾಗಿದ್ದಾರೆ.

ಕಾರ್ಯಕ್ರಮಕ್ಕೂ ಮುನ್ನ ಗದಗದ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಮೂಡುಬಿದರಿಗೆ 2 ಲಕ್ಷ ಜೋಳದ ರೊಟ್ಟಿ ಕಳುಹಿಸಲು ಮುಂದಾಗಿದ್ದಾರೆ.

ಭಾರತ, ಕೆನಡಾ, ಮಲೇಷ್ಯಾ, ಥೈಲ್ಯಾಂಡ್ ಮತ್ತು ಇತರ 10 ದೇಶಗಳ ಸುಮಾರು 50,000 ವಿದ್ಯಾರ್ಥಿಗಳು ಮತ್ತು 10,000 ಶಿಕ್ಷಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗದಗ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರತಿ ತಾಲೂಕಿನಿಂದ 40 ರಿಂದ 50 ಸಾವಿರ ರೊಟ್ಟಿ ಸಂಗ್ರಹಿಸುವ ಜವಾಬ್ದಾರಿಯನ್ನು ಸದಸ್ಯರಿಗೆ ನೀಡಿದೆ.

ಗದಗ ಪಟ್ಟಣದ ವಿವೇಕಾನಂದನಗರದ ವಿದ್ಯಾರ್ಥಿ ಶರಣು ಬಾರ್ಕರ್ ಮಾತನಾಡಿ, ನಮ್ಮ ಶಿಕ್ಷಕರು ಮತ್ತು ಇತರ ಸದಸ್ಯರು ಜೋಳದ ರೊಟ್ಟಿ ಕಳುಹಿಸಲು ನಿರ್ಧರಿಸಿದ್ದಾರೆ. ಬೇರೆ ಭಾಗದ ವಿದ್ಯಾರ್ಥಿಗಳೂ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದಾರೆ. ಗದಗ ಸ್ಕೌಟ್ ಮತ್ತು ಗೈಡ್ಸ್ ತಂಡ 2 ಲಕ್ಷ ರೊಟ್ಟಿ ಕಳುಹಿಸಲು ನಿರ್ಧರಿಸಿದ್ದು, ಅದನ್ನು ಸಾಧಿಸಲು ಜಿಲ್ಲೆಯ ಮೂಲೆ ಮೂಲೆಗೆ ತೆರಳಿ ಆರ್ಡರ್ ನೀಡಿ ರೊಟ್ಟಿ ಪಡೆಯುತ್ತಿದ್ದೇವೆಂದು ಹೇಳಿದ್ದಾರೆ.

ಸೋಮವಾರದವರೆಗೆ, ನಾವು ಸುಮಾರು 80,000 ರೊಟ್ಟಿಗಳನ್ನು ಸಂಗ್ರಹಿಸಿದ್ದೇವೆ. ಅವುಗಳನ್ನು ಈವೆಂಟ್‌ಗೆ ಎರಡು ಅಥವಾ ಮೂರು ದಿನಗಳ ಮೊದಲು ಕಳುಹಿಸುತ್ತೇವೆಂದು ತಿಳಿಸಿದ್ದಾರೆ.

ಈ ವಿಚಾರವನ್ನು ಪ್ರಸ್ತಾಪಿಸಿದ ಲಕ್ಷ್ಮೇಶ್ವರ ಬಿಇಒ ಅವರು, “ಇದು ಪ್ರಪಂಚದಾದ್ಯಂತದ ವಿದ್ಯಾರ್ಥಿಗಳ ಸಭೆಯಾಗಿದೆ. ವಿದ್ಯಾರ್ಥಿಗಳು ರೊಟ್ಟಿ, ಶೇಂಗಾ (ಕಡಲೆ) ಚಟ್ನಿ ಮತ್ತು ಮೊಸರು ರುಚಿ ನೋಡಬೇಕೆಂದು ನಾವು ಬಯಸುತ್ತೇವೆ. ಸದ್ಯಕ್ಕೆ 2 ಲಕ್ಷ ರೊಟ್ಟಿ ಮತ್ತು 2 ಕ್ವಿಂಟಾಲ್ ಶೇಂಗಾ ಚಟ್ನಿ ಕಳುಹಿಸಲು ಸಿದ್ಧತೆ ನಡೆಸಿದ್ದೇವೆಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT