ರೈಲ್ವೆ ಇಲಾಖೆಯಿಂದ ಅಭಿಯಾನ 
ರಾಜ್ಯ

ಕಾಯ್ದಿರಿಸದ ಟಿಕೆಟ್ ಖರೀದಿಗೆ UTS ಆಪ್ ಬಳಕೆ ಮಾಡಲು ಬೆಂಗಳೂರು ರೈಲ್ವೆ ವಿಭಾಗದಿಂದ ಅಭಿಯಾನ

ಸಾಲು ಸಾಲು ರಜೆ ದಿನಗಳು ಹಾಗೂ ಹಬ್ಬದ ದಿನಗಳಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕಾಯ್ದಿರಿಸದ ಟಿಕೆಟ್ ಖರೀದಿಗೆ ಆಪ್ ಬಳಕೆ ಮಾಡುವ ಅವಕಾಶವನ್ನು ರೈಲ್ವೆ ಇಲಾಖೆ ಕಲ್ಪಿಸಿದೆ.

ಬೆಂಗಳೂರು: ಸಾಲು ಸಾಲು ರಜೆ ದಿನಗಳು ಹಾಗೂ ಹಬ್ಬದ ದಿನಗಳಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸಲು ಕಾಯ್ದಿರಿಸದ ಟಿಕೆಟ್ ಖರೀದಿಗೆ UTS ಆಪ್ ಬಳಕೆ ಮಾಡುವ ಅವಕಾಶವನ್ನು ರೈಲ್ವೆ ಇಲಾಖೆ ಕಲ್ಪಿಸಿದೆ.
 
ಪ್ರಯಾಣಿಕರಿಗೆ ಈ ಯುಟಿಎಸ್ ಮೊಬೈಲ್ ಅಪ್ಲಿಕೇಶನ್ ಕುರಿತ ಬಗ್ಗೆ ಜಾಗೃತಿ, ಅರಿವು ಮೂಡಿಸಲು ನೈಋತ್ಯ ರೈಲ್ವೆ ವಿಭಾಗದ ಬೆಂಗಳೂರು ವಿಭಾಗ ಒಂದು ತಿಂಗಳ ಕಾಲ ಅಭಿಯಾನ ಹಮ್ಮಿ ಕೊಂಡಿದೆ.
 
Unreserved Ticketing System (UTS) ಎಂಬುದು ಈ ಮೊಬೈಲ್ ಅಪ್ಲಿಕೇಷನ್ ಆಗಿದ್ದು, ಇದರ ಮೂಲಕ ಕಾಯ್ದಿರಿಸದ, ಸೀಸನ್ ಅಥವಾ ಪ್ಲಾಟ್ ಫಾರ್ಮ್ ಟಿಕೆಟ್ ಗಳನ್ನು ಖರೀದಿಸಬಹುದಾಗಿದ್ದು, ಆಪ್ ನ್ನು ಗೂಗಲ್ ಪ್ಲೇ ಮೂಲಕ ಡೌನ್ ಲೋಡ್ ಮಾಡಬಹುದಾಗಿದೆ.

ಇದನ್ನೂ ಓದಿ: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ 4.8 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನವನ್ನು ಹಿಂದಿರುಗಿಸಿದ ಪ್ರಾಮಾಣಿಕ ಹಮಾಲಿ
 
ಈ ಆಪ್ ಬಳಕೆಯಿಂದ ಪ್ರಯಾಣಿಕರು ಸರತಿ ಸಾಲಿನಲ್ಲಿ ನಿಲ್ಲುವುದು ತಪ್ಪಲಿದೆ. ಡಿಜಿಟಲ್ ಮೂಲಕ ಪ್ರಯಾಣಿಸಬಹುದಾಗಿದೆ. ಇದರಿಂದ ಕ್ಯಾಶ್ ಲೆಸ್ ವಹಿವಾಟಿಗೂ ಅನುಕೂಲವಾಗಲಿದೆ ಎಂದು ರೈಲ್ವೆ ಇಲಾಖೆ ಹೇಳಿದೆ.

ಸಾರ್ವಜನಿಕರ ಸಲಹೆಗೆ ಆಹ್ವಾನ:
UTS ಅಪ್ಲಿಕೇಶನ್‌ ಬಳಕೆಯ ಕುರಿತು ಯಾವುದೇ ಸಲಹೆಗಳನ್ನು twitter ನಲ್ಲಿ  @SrDCM_BENGALURU ಗೆ / Whatsapp ನಲ್ಲಿ 8861309572 ಗೆ / dcmbengaluru@gmail.com ಮೇಲ್ ಗೆ ಕಳುಹಿಸಬಹುದು. ಮೌಲ್ಯಯುತವಾದ ಸಲಹೆ ನೀಡುವವರಿಗೆ ರೈಲ್ವೆ ವಿಭಾಗದಿಂದ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ. ಈ ಅಭಿಯಾನ ಜನವರಿ 11, 2023 ರವರೆಗೆ ಇರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT