ಸಂಗ್ರಹ ಚಿತ್ರ 
ರಾಜ್ಯ

ಮುರುಡೇಶ್ವರ ದೇವಸ್ಥಾನದಲ್ಲಿ 'ವಸ್ತ್ರ ಸಂಹಿತೆ ನೀತಿ' ಜಾರಿ ಮಾಡಿ: ಹಿಂದೂ ಸಂಘಟನೆಗಳ ಆಗ್ರಹ

ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಸಂಘಟನೆಗಳು ಮುರುಡೇಶ್ವರ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿವೆ.

ಕಾರವಾರ: ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ಹಿಂದೂ ಸಂಘಟನೆಗಳು ಮುರುಡೇಶ್ವರ ದೇವಸ್ಥಾನದ ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿವೆ.

ಇತ್ತೀಚೆಗೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ನಂತರ ಶಿರಸಿ ಮಾರಿಕಾಂಬಾ ವಸ್ತ್ರ ಸಂಹಿತಿ ನೀತಿ ಜಾರಿಗೆ ಹಿಂದೂ ಸಂಘಟನೆಗಳು ಮನವಿ ಮಾಡಿದ್ದವು. ಇದೀಗ ಮುರುಡೇಶ್ವರ ದೇವಸ್ಥಾನದಲ್ಲಿ ಜಾರಿಗೆ ತರುವಂತೆ ಆಗ್ರಹಿಸುತ್ತಿವೆ.

ಹಿಂದೂ ಜನ ಜಾಗೃತಿ ಸಮಿತಿ (ಎಚ್‌ಜೆಜೆಎಸ್) ಆಶ್ರಯದಲ್ಲಿ ವಿವಿಧ ಹಿಂದೂ ಸಂಘಟನೆಗಳು ಗೋಕರ್ಣ ದೇವಸ್ಥಾನದಂತೆಯೇ ಇಲ್ಲಿಯೂ ವಸ್ತ್ರ ಸಂಹಿತೆ ನೀಡಿ ಜಾರಿ ಮಾಡುವಂತೆ ಮುರುಡೇಶ್ವರ ಅಧಿಕಾರಿಗಳನ್ನು ಸಂಪರ್ಕಿಸಿವೆ ಎಂದು ತಿಳಿದುಬಂದಿದೆ.

ಐತಿಹಾಸಿಕವಾಗಿ ಪ್ರಸಿದ್ಧಿ ಪಡೆದ ಮುರುಡೇಶ್ವರ ದೇವಸ್ಥಾನದ ಪಾವಿತ್ರತೆಯನ್ನು ಕಾಪಾಡುವ ದೃಷ್ಟಿಯಿಂದ ಸಂಪ್ರದಾಯಿಕ ಉಡುಪು ಕಡ್ಡಾಯ ಮಾಡಬೇಕು. ಪಾಶ್ಚಾತ್ಯ ಉಡುಪು ಧರಿಸಿ ದೇವಸ್ಥಾನಕ್ಕೆ ಬರುವವರಿಗೆ ಒಳ ಪ್ರವೇಶ ನೀಡಬಾರದು. ಭಾರತೀಯ ಸಂಪ್ರದಾಯಿಕ ಉಡುಪು ಧರಿಸಿ ಬರುವವರಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕೊಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯಿಂದ ಮನವಿ ಸಲ್ಲಿಸಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಟ್ರಸ್ಟಿಗಳನ್ನು ಭೇಟಿ ಮಾಡಿ ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೆ ತರಲು ಮನವಿ ಮಾಡಿದ್ದೇವೆ" ಎಂದು ಹಿಂದೂ ಜನ ಜಾಗೃತಿ ಸಮಿತಿಯ ಜಿಲ್ಲಾ ಸಂಚಾಲಕ ಶರತ್ ಕುಮಾರ್ ನಾಯಕ್ ಅವರು ಹೇಳಿದ್ದಾರೆ.

ಉತ್ತರ ಕನ್ನಡ ಪ್ರವಾಸಿ ತಾಣವಾಗಿರುವುದರಿಂದ ಇಲ್ಲಿಗೆ ಸಾವಿರಾರು ಜನರು ಆಗಮಿಸುತ್ತಾರೆ. ಆದರೆ, ಸಾಕಷ್ಟು ಜನರು ಸಂಪ್ರದಾಯದಂತೆ ಸೂಕ್ತವಾಗಿ ವಸ್ತ್ರಗಳನ್ನು ಧರಿಸದೆ ದೇವಸ್ಥಾನಗಳಿಗೆ ಭೇಟಿ ನೀಡುತ್ತಾರೆ. ಕೆಲವು ಪ್ರವಾಸಿಗರು ತಮ್ಮ ಪಾದರಕ್ಷೆಗಳನ್ನು ತಮ್ಮ ಚೀಲಗಳಲ್ಲಿ ಹಾಕಿಕೊಂಡು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಇದು ಸರಿಯಲ್ಲ ಎಂದು ಹಿಂದೂ ಜಾಗೃತಿ ಸಮಿತಿಯ ಮತ್ತೊಬ್ಬ ಸದಸ್ಯ ಶ್ರೀಕಾಂತ್ ನಾಯಕ್ ತಿಳಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿ ಈಗಾಗಲೇ ಶಿರಸಿ ಮಾರಿಕಾಂಬಾ ದೇವಸ್ಥಾನ ಮತ್ತು ಬನವಾಸಿಯ ಮಧುಕೇಶ್ವರ ದೇವಸ್ಥಾನವನ್ನು ಸಂಪರ್ಕಿಸಿ ವಸ್ತ್ರ ಸಂಹಿತೆ ನತಿ ಜಾರಿಗೊಳಿಸುವಂತೆ ಒತ್ತಾಯಿಸಿದೆ. ಈ ಸಂಬಂಧ ಮಾರಿಕಾಂಬಾ ದೇವಸ್ಥಾನ ಮತ್ತು ಬನವಾಸಿ ದೇವಸ್ಥಾನ ಟ್ರಸ್ಟ್ ಸದಸ್ಯರು ಈಗಾಗಲೇ ಸಭೆ ನಡೆಸಿದ್ದಾರೆ ಎಂದು ನಾಯಕ್ ಮಾಹಿತಿ ನೀಡಿದ್ದಾರೆ.

ಗುಣವಂತೇಶ್ವರ, ಧಾರೇಶ್ವರ ಮತ್ತು ಶೆಜ್ಜೇಶ್ವರ ಮುಂತಾದ ದೇವಸ್ಥಾನಗಳ ಟ್ರಸ್ಟ್‌ಗಳಿಗೆ ಡ್ರೆಸ್ ಕೋಡ್ ಜಾರಿಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಮನವಿ ಮಾಡುತ್ತಿದೆ. "ದೇವಸ್ಥಾನವು ವಸ್ತ್ರಸಂಹಿತೆಯನ್ನು ಜಾರಿಗೆ ತರಲು ನಿರ್ಧರಿಸಿದ ಬಳಿಕ ಈ ಕುರಿತು ಬೋರ್ಡ್ ಗಳನ್ನು ಹಾಕಬೇಕೆಂದು ತಿಳಿಸಿದ್ದಾರೆ.

ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯನ್ನು ನೀತಿಯನ್ನು ಜಾರಿಗೆ ತರಬಹುದು. ಆದರೆ, ಸಂಪೂರ್ಣವಾಗಿ ಶೇ.100 ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಇಡುಗುಂಜಿ ಗಣಪತಿ ದೇವಸ್ಥಾನದ ಮುಖ್ಯ ಅರ್ಚಕ ವಿಷ್ಣು ಭಟ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT