ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. 
ರಾಜ್ಯ

ಕಬ್ಬಿನ ತೂಕದಲ್ಲಿ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ

ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿನ್ನೆ ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಂಗಳೂರು: ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿತಗೊಳಿಸಿ ಕಾರ್ಖಾನೆಗಳು ಕಬ್ಬು ಬೆಳೆಗಾರರನ್ನು ವಂಚಿಸುತ್ತಿವೆ ಎಂಬ ದೂರಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ನಿನ್ನೆ ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆಸಿದ್ದಾರೆ.

ಮೊಟ್ಟಮೊದಲ ಬಾರಿಗೆ ರಾಜ್ಯ ಸರ್ಕಾರವು ಸಕ್ಕರೆ ಕಾರ್ಖಾನೆಗಳ ಮೇಲೆ ಈ ರೀತಿಯ ಬೃಹತ್ ದಾಳಿ ನಡೆಸಿದೆ, ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಇಲಾಖೆಗಳ ಅಧಿಕಾರಿಗಳು ಮತ್ತು ಪೊಲೀಸರು ಜಂಟಿಯಾಗಿ ಆರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದರು. ಬೆಂಗಳೂರಿನಿಂದ ಹಿರಿಯ ಅಧಿಕಾರಿಗಳು ಕಾರ್ಯಾಚರಣೆಯನ್ನು ಸಂಯೋಜಿಸಿದ್ದರು. 

ಕೈಗಾರಿಕೆ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿಮಿಟೆಡ್‌ನ ಕೂಡ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಜವಳಿ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರ ನಿರ್ದೇಶನದ ಮೇರೆಗೆ ಕಬ್ಬಿನ ಅಭಿವೃದ್ಧಿ ಆಯುಕ್ತ ಶಿವಾನಂದ ಎಚ್ ಕಲಕೇರಿ ಮತ್ತು ಸಕ್ಕರೆ ನಿರ್ದೇಶಕರ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

ಕೆಲವು ಸಕ್ಕರೆ ಕಾರ್ಖಾನೆಗಳು ತೂಕ ಇಳಿಸಿ ರೈತರಿಗೆ ವಂಚನೆ ಮಾಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.

ದಾಳಿಯ ವೇಳೆ ಸಂಗ್ರಹಿಸಿದ ವಿವರಗಳನ್ನು ಪರಿಶೀಲಿಸಲಾಗುವುದು ಮತ್ತು ಆ ಮಾಹಿತಿಯ ಆಧಾರದ ಮೇಲೆ ಕಾರ್ಖಾನೆಗಳಿಂದ ವಿವರಣೆಯನ್ನು ಪಡೆಯಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈತರಿಗೆ ವಂಚನೆ ಮಾಡುತ್ತಿರುವ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ. 

ಬೆಳಗಾವಿಯಲ್ಲಿ 8, ಬಾಗಲಕೋಟೆಯಲ್ಲಿ 4, ವಿಜಯಪುರದಲ್ಲಿ 4, ಬೀದರ್‌ನಲ್ಲಿ 2, ಕಲಬುರ್ಗಿಯಲ್ಲಿ 2, ಉತ್ತರ ಕನ್ನಡ ಜಿಲ್ಲೆಗಳ ಒಂದು ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ.ವಂಚನೆ ಮಾಡಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಒಬ್ಬ ರೈತ 15 ಟನ್ ಕಬ್ಬು ಪೂರೈಸಿದರೆ 14 ಟನ್ ಎಂದು ತೋರಿಸಿ ರೈತನಿಗೆ ವಂಚನೆ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. 

ಸಿಎಂ ಭೇಟಿ
ಕಳೆದ 23 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರು ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು. ದರವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಕುರುಬೂರು ಶಾಂತ ಕುಮಾರ್ ಹೇಳಿದರು, ಆದರೆ ಎಷ್ಟು ಹೆಚ್ಚಳ ಮತ್ತು ಅದನ್ನು ಯಾವಾಗ ಜಾರಿಗೆ ತರಲಾಗುತ್ತದೆ ಎಂಬುದನ್ನು ನಿರ್ದಿಷ್ಟಪಡಿಸಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT