ರಾಜ್ಯ

ಕಾಮುಕ ಶಿಕ್ಷಕನಿಗೆ ವಿದ್ಯಾರ್ಥಿನಿಯರ ಗೂಸ: ಶ್ರೀರಂಗಪಟ್ಟಣದ ವಸತಿ ನಿಲಯದಲ್ಲಿ ತಕ್ಕ ಪಾಠ ಕಲಿಸಿದ ಮಕ್ಕಳು!

Sumana Upadhyaya

ಶ್ರೀರಂಗಪಟ್ಟಣ: ವಿದ್ಯೆ, ಸನ್ನಡತೆ, ಸನ್ಮಾರ್ಗವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕಾದ ಶಿಕ್ಷಕನೇ ಕಾಮುಕನ ರೀತಿ ವರ್ತಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದ ಪರಿಸ್ಥಿತಿ. ಶಿಕ್ಷಕನ ವರ್ತನೆಗೆ ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಕೋಲು, ದೊಣ್ಣೆ ಹಿಡಿದುಕೊಂಡು ಮನಸಾರೆ ಥಳಿಸಿದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಟ್ಟೇರಿ ಗ್ರಾಮದಲ್ಲಿನ ವಸತಿ ನಿಲಯದಲ್ಲಿ ನಡೆದಿದೆ. ಮುಖ್ಯ ಶಿಕ್ಷಕನಿಗೆ ವಿದ್ಯಾರ್ಥಿನಿಯರು ಕೈಯಲ್ಲಿ ದೊಣ್ಣೆ ಹಿಡಿದು ಮನಸೋ ಇಚ್ಛೆ ಥಳಿಸಿದ ವಿಡಿಯೊ ವೈರಲ್ ಆಗಿದೆ. 

ಚಿನ್ಮಯಾನಂದ ಮೂರ್ತಿ ಥಳಿತಕ್ಕೊಳಾದ ಮುಖ್ಯ ಶಿಕ್ಷಕ. ನಿನ್ನೆ ತಡರಾತ್ರಿ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತಸಿದ್ದರಿಂದ ತಕ್ಷಣವೇ ಎಚ್ಚೆತ್ತ ವಿದ್ಯಾರ್ಥಿನಿಯರು ಸಹಪಾಠಿಗಳಿಗೆ ಮಾಹಿತಿ ನೀಡಿ ನಂತರ ಕೈಯಲ್ಲಿ ಕೋಲು ದೊಣ್ಣೆ ಹಿಡಿದು ಕಾಮುಕ ಶಿಕ್ಷನ ಮೇಲೆ ದಾಳಿ ನಡೆಸಿದ್ದಾರೆ. ಕೆ.ಆರ್.ಎಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. 

SCROLL FOR NEXT