ಸಾಂದರ್ಭಿಕ ಚಿತ್ರ 
ರಾಜ್ಯ

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ: ಗೃಹ ಇಲಾಖೆ

ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರದಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಸುರಕ್ಷತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಘೋಷಿತ ಅಪರಾಧಿಗಳ ಬಗ್ಗೆ  ಮಾಹಿತಿ ನೀಡಿ ಪೊಲೀಸರಿಗೆ ನೆರವಾಗುವವರಿಗೆ 20,000 ನಗದು ಬಹುಮಾನ ನೀಡಲು ಅವಕಾಶವಿತ್ತು. ಇದೀಗ ಅದನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.

ಈ ಸಂಬಂಧ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಸಲ್ಲಿಸಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

ಪೊಲೀಸ್ ಮಾಹಿತಿದಾರರಿಗೆ 20,000ದವರೆಗೆ ಮಾತ್ರ ಬಹುಮಾನ ನೀಡಲು ಅವಕಾಶ ಇರುವುದರಿಂದ ಹೆಚ್ಚಿನ ಜನ ಪೊಲೀಸ್‌ ಇಲಾಖೆಯ ಮನವಿಗೆ ಸ್ಪಂದಿಸುವುದಿಲ್ಲ. ಅದನ್ನು 5 ಲಕ್ಷದವರೆಗೂ ಬಹುಮಾನ ನೀಡಲು ಅವಕಾಶ ಕಲ್ಪಿಸಬೇಕು. ಆಗ ತ್ವರಿತವಾಗಿ ಆರೋಪಿಗಳನ್ನು ಬಂಧಿಸಲು ಸಹಕಾರಿಯಾಗುತ್ತದೆ’ ಎಂದು ರಾಜ್ಯ ಪೊಲೀಸ್‌ ಮಹಾನಿರ್ದೇಶಕರು 2021ರ ಡಿಸೆಂಬರ್‌ನಲ್ಲಿ ಗೃಹ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದರು. ಗೃಹ ಇಲಾಖೆಯು ಈ ಪ್ರಸ್ತಾವವನ್ನು ಆರ್ಥಿಕ ಇಲಾಖೆಗೆ ಕಳುಹಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT