ಸಾಂದರ್ಭಿಕ ಚಿತ್ರ 
ರಾಜ್ಯ

4 ಸಂಚಾರ ಪೊಲೀಸ್ ಠಾಣೆಗಳ ಆರಂಭಕ್ಕೆ ಗೃಹ ಇಲಾಖೆ ಆದೇಶ

ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಮತ್ತೊಂದು ಕ್ರಮವಾಗಿ 4 ಹೊಸ ಸಂಚಾರ ಪೊಲೀಸ್ ಠಾಣೆಗಳು ಮತ್ತು ಎರಡು ಸಂಚಾರ ಉಪವಿಭಾಗಗಳನ್ನು ತೆರೆಯಲು ಸಿಬ್ಬಂದಿಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ನಗರದ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಮತ್ತೊಂದು ಕ್ರಮವಾಗಿ 4 ಹೊಸ ಸಂಚಾರ ಪೊಲೀಸ್ ಠಾಣೆಗಳು ಮತ್ತು ಎರಡು ಸಂಚಾರ ಉಪವಿಭಾಗಗಳನ್ನು ತೆರೆಯಲು ಸಿಬ್ಬಂದಿಯನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ನಗರದಲ್ಲಿ ಎರಡು ಸೇರಿದಂತೆ ರಾಜ್ಯಾದ್ಯಂತ ಏಳು ಪೊಲೀಸ್ ಉಪ ವಿಭಾಗಗಳನ್ನು ಸ್ಥಾಪಿಸಲು ರಾಜ್ಯ ಗೃಹ ಇಲಾಖೆ ಆದೇಶ ಹೊರಡಿಸಿದೆ.

ಇತ್ತೀಚೆಗೆ ವಿಸರ್ಜಿಸಲಾದ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ಹೊಸ ಠಾಣೆಗಳಿಗೆ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಗುರುವಾರ ಹೊರಡಿಸಿರುವ ಆದೇಶದಂತೆ ತಲಘಟ್ಟಪುರ, ಬೆಳ್ಳಂದೂರು, ಹೆಣ್ಣೂರು ಮತ್ತು ಮಹದೇವಪುರದಲ್ಲಿ ಚಾರ ಠಾಣೆಗಳನ್ನು ತೆರೆಯಲಾಗುತ್ತಿದೆ.

ಬೆಳ್ಳಂದೂರು ಮತ್ತು ಮಹದೇವಪುರದಲ್ಲಿ ಅನೇಕ ಐಟಿ ಕಂಪನಿಗಳಿವೆ ಮತ್ತು ಇಲ್ಲಿ ಹೊಸ ಟ್ರಾಫಿಕ್ ಪೊಲೀಸ್ ಠಾಣೆಗಳ ಸ್ಥಾಪಿಸುವುದರಿಂದ ಟೆಕ್-ಕಾರಿಡಾರ್‌ನಲ್ಲಿ ಉತ್ತಮ ಟ್ರಾಫಿಕ್ ನಿರ್ವಹಣೆ ಮಾಡುವ ಗುರಿಯನ್ನು ಹೊಂದಲಾಗಿದೆ.

ತಲಘಟ್ಟಪುರ ಮತ್ತು ಬೆಳ್ಳಂದೂರು ಠಾಣೆಗಳಿಗೆ ತಲಾ 43 ಸಿಬ್ಬಂದಿ ಹಾಗೂ ಹೆಣ್ಣೂರು ಮತ್ತು ಮಹದೇವಪುರ ಠಾಣೆಗಳಿಗೆ ಕ್ರಮವಾಗಿ 42 ಮತ್ತು 37 ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ.

ವಿಶೇಷ ಪೊಲೀಸ್ ಕಮಿಷನರ್ (ಸಂಚಾರ) ಎಂಎ ಸಲೀಂ ಅವರು ಮಾತನಾಡಿ, ನಾಲ್ಕು ಹೊಸ ಸಂಚಾರಿ ಪೊಲೀಸ್ ಠಾಣೆಗಳು ಶೀಘ್ರದಲ್ಲೇ ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.

ಠಾಣೆಗಳ ಸ್ಥಾಪನೆಗೆ ಈಗಾಗಲೇ ಸ್ಥಳಗಳನ್ನು ಗುರುತಿಸಲಾಗಿದೆ. ಶೀಘ್ರದಲ್ಲೇ ನ್ಯಾಯವ್ಯಾಪ್ತಿಯ ಅಧಿಸೂಚನೆಯನ್ನು ನೀಡಲಾಗುವುದು, ನಂತರ ಠಾಣೆಗಳು ಕಾರ್ಯನಿರ್ವಹಿಸಲು ಪ್ರಾರಂಭಿಸುತ್ತವೆ ಎಂದು ತಿಳಿಸಿದ್ದಾರೆ.

ಅಲ್ಲದೆ, ವಿಜಯನಗರ ಮತ್ತು ಎಚ್‌ಎಸ್‌ಆರ್ ಲೇಔಟ್ ಸಂಚಾರ ಉಪವಿಭಾಗಗಳನ್ನು ರಚಿಸಲಾಗಿದ್ದು, ಪೀಣ್ಯ ಮತ್ತು ಕೆಂಗೇರಿಗೆ ಎರಡು ಹೊಸ ಕಾನೂನು ಮತ್ತು ಸುವ್ಯವಸ್ಥೆ ಉಪವಿಭಾಗಗಳನ್ನು ಮಂಜೂರು ಮಾಡಲಾಗಿದೆ.

ಮೈಸೂರು ನಗರದಲ್ಲಿ ವಿಜಯನಗರ ಉಪ ವಿಭಾಗ, ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ–2 ಉಪ ವಿಭಾಗ, ಹಾಸನ ಜಿಲ್ಲೆಯಲ್ಲಿ ಚನ್ನರಾಯಪಟ್ಟಣ ಉಪ ವಿಭಾಗ, ವಿಜಯಪುರ ಜಿಲ್ಲೆಯಲ್ಲಿ ವಿಜಯಪುರ ಗ್ರಾಮಾಂತರ ಉಪ ವಿಭಾಗ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ತಂಗಡಿ ಉಪ ವಿಭಾಗಗಳನ್ನು ತೆರೆಯಲಾಗಿದೆ.

ಏತನ್ಮಧ್ಯೆ, ವೃತ್ತ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿದ್ದ 40 ಠಾಣೆಗಳನ್ನು ಪೊಲೀಸ್‌ ಇನ್‌ಸ್ಪೆಕ್ಟರ್‌ ನೇತೃತ್ವದ ಠಾಣೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT